ಗದಗ: ಕಟ್ಟಡ ಕಾರ್ಮಿಕರ ಮಕ್ಕಳು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿರುವುದು ಶ್ಲಾಘನೀಯ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಕಾಂಗ್ರೆಸ್ ಯುವ ಪ್ರದಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ ಹೇಳಿದರು.
ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕರ ಹಿತ ಕಾಪಾಡಲು ಹಾಗೂ ಅವರ ಸೇವೆಗೆ ಸದಾ ಸಿದ್ಧ ಸರ್ಕಾರದಿಂದ ಏನಾದರೂ ಸೌಲಭ್ಯ ಸಿಗಲು ನಿಮ್ಮ ಮತ್ತು ಸರ್ಕಾರ ನಡುವೆ ಕೊಂಡಿಯಾಗಿ ಶ್ರಮಿಸುತ್ತೇನೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಬಸವರಾಜ ಕಡೆಮನಿ ಮಾತನಾಡಿ, ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಕಲಿತು ಉದ್ಯೋಗ ಪಡೆಯುವ ಪ್ರಯತ್ನ ಮಾಡುವುದಕ್ಕಿಂತ ಉದ್ಯೋಗ ಸೃಷ್ಟಿ ಮಾಡಬೇಕು ಸಂಘಟನೆಯ ಆರಂಭ ಮಾಡುವುದು ಸುಲಭ ಅದನ್ನು ಮುನ್ನೆಡೆಸಿಕೊಂಡು ಹೋಗುವುದು ಬಹಳ ಕಠಿಣ ಕಾರ್ಮಿಕ ಕಲ್ಯಾಣ ಸಂಸ್ಥೆ ಪ್ರತಿ ವರ್ಷ ಒಂದೊಂದು ರೀತಿ ಕಾರ್ಯಕ್ರಮ ಮಾಡಿ ಎಲ್ಲ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಪ್ರತಿಭಾವಂತ ವಿದ್ಯಾರ್ಥಿ ಸಮೃದ್ಧಿ ಶ್ರೀಧರ ಸಿದ್ದಲಿಂಗ ಮಾತನಾಡಿದರು.