ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಶೀಳನೆರೆ ಗ್ರಾಮದಲ್ಲಿ ನಿರಂತರ ಫೌಂಡೇಷನ್ ಸಂಸ್ಥೆ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜಿಗೆ ಕಂಪ್ಯೂಟರ್ ಹಾಗೂ ಎರಡು ಪ್ರೊಜೆಕ್ಟರ್ ಸಾಮಗ್ರಿಗಳನ್ನು ಹಸ್ತಾಂತರಿಸಿ ಮಾತನಾಡಿದರು.
ನಿರಂತರ ಫೌಂಡೇಷನ್ ಸಂಸ್ಥೆ ಮೂಲ ಸೌಕರ್ಯಗಳಿಂದ ವಂಚಿತವಾದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸಹಕಾರ ನೀಡುತ್ತಾ ಬಂದಿರುವುದು ಒಳ್ಳೆಯ ಬೆಳವಣಿಗೆ. ಒಂದು ಸರ್ಕಾರ ಮಾಡಲಾಗದ ಕೆಲಸವನ್ನು ಸ್ವಯಂಸೇವಾ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಎಂದರು.ಹಲವು ವ್ಯಕ್ತಿಗಳು ಒಗ್ಗೂಡಿ ಒಂದು ಸಂಸ್ಥೆಯನ್ನು ಸ್ಥಾಪಿಸಿ ಅವರ ದುಡಿಮೆ ಸ್ವಲ್ಪ ಭಾಗದ ಹಣವನ್ನು ಸಮಾಜಸೇವಾ ಕಾರ್ಯಗಳಿಗೆ ಬಳಕೆ ಮಾಡುತ್ತಿರುವುದು ಅಭಿನಂದನಾರ್ಹ. ಅವರ ಬದ್ಧತೆ, ಜವಾಬ್ದಾರಿಗಳು ಎಷ್ಟು ಎಂಬುದು ಅವರ ಮಾತುಗಳಿಂದಲೇ ತಿಳಿಯುತ್ತದೆ ಎಂದು ಹೇಳಿದರು.
ಪ್ರಾಂಶುಪಾಲರು ಕಾಲೇಜಿಗೆ ಆಗಬೇಕಾದ ಕೆಲಸಗಳ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಇದಕ್ಕೆ ಸ್ಪಂದಿಸಿ ಕಾಲೇಜು ಕಟ್ಟಡಕ್ಕೆ ಮೇಲ್ಛಾವಣಿಗಾಗಿ 10 ಲಕ್ಷ ರು. ಹಾಗೂ ತುರ್ತು ರಿಪೇರಿ ಕೆಲಸ ಮಾಡಿಸಿ ಕೊಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರಂತರ ಸಂಸ್ಥೆ ಜಗದೀಶ್, ರಾಜ್ಯ ಮಾರಾಟ ಮಹಾ ಮಂಡಳಿ ನಿರ್ದೇಶಕ ಎಸ್.ಎಲ್.ಮೋಹನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾದ್ಯಕ್ಷ ಪ್ರಸನ್ನ, ಗ್ರಾಪಂ ಸದಸ್ಯ ಸಿದ್ದೇಶ್, ಕಾಲೇಜಿನ ಪ್ರಾಂಶುಪಾಲ ಎಂ.ಕೆ.ವಾಸು, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ನೀಲಮ್ಮ, ಎಸ್.ಡಿ.ಎಂಸಿ ಅಧ್ಯಕ್ಷ ಶಿವರಾಮು, ಎಂಡಿಸಿಸಿ ಬ್ಯಾಂಕ್ ಉದ್ಯೊಗಿ ಸೋಮಣ್ಣ, ಪ್ರಕಾಶ್, ಹಾಗೂ ಕಾಲೇಜಿನ ಉಪನ್ಯಾಸಕರು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.