ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು

KannadaprabhaNewsNetwork |  
Published : Jul 27, 2025, 12:02 AM IST
ಪೊಟೋ ಪೈಲ್ ನೇಮ್ ೨೬ಎಸ್‌ಜಿವಿ೨   ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಕಾಲೇಜಿನಲ್ಲಿ ಜರುಗಿದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲಿ ಶ್ರೀಮತಿ ಶಕುಂತಲಾ ಕೋಣನವರ  | Kannada Prabha

ಸಾರಾಂಶ

ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿ ಆತ್ಮಸ್ಥೈರ್ಯ ತುಂಬುವ ಮೂಲಕ ಸಂಬಂಧಗಳನ್ನು ಗಟ್ಟಿಗೊಳಿಸುವ ಈ ಕಾರ್ಯ ಶ್ಲಾಘನೀಯವಾದುದು

ಶಿಗ್ಗಾಂವಿ: ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ, ವಿದ್ಯಾರ್ಥಿಗಳು ಅವಕಾಶಕ್ಕಾಗಿ ಕಾಯದೆ ಹೊಸ ಹೊಸ ಅವಕಾಶ ಸೃಷ್ಟಿ ಮಾಡಿಕೊಳ್ಳಬೇಕು ಎಂದು ವಚನ ನಿಧಿ ವನಿತಾ ಸಂಘದ ಉಪಾಧ್ಯಕ್ಷೆ ಶಕುಂತಲಾ ಕೋಣನವರ ಹೇಳಿದರು.

ಪಟ್ಟಣದ ಶ್ರೀಚನ್ನಪ್ಪ ಕುನ್ನೂರ ಕಾಲೇಜಿನಲ್ಲಿ ಜರುಗಿದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅದೃಷ್ಟ ಎಂಬುದು ಲಿಪ್ಟ ಇದ್ದಂತೆ, ಅದು ಒಮ್ಮೊಮ್ಮೆ ಕೈಕೊಡಬಹುದು ಆದರೆ ಪ್ರಯತ್ನ ಎಂದಿಗೂ ವಿಫಲವಾಗುವುದಿಲ್ಲ ಹಾಗಾಗಿ ಕೇವಲ ಅದೃಷ್ಟ ನಂಬಿ ಕೂಡಬಾರದು ಸತತ ಪ್ರಯತ್ನದಿಂದ ಯಶಸ್ಸಿನತ್ತ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖ್ಯಾತ ವೈದ್ಯೆ ಡಾ.ಲತಾ ನಿಡಗುಂದಿ, ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿ ಆತ್ಮಸ್ಥೈರ್ಯ ತುಂಬುವ ಮೂಲಕ ಸಂಬಂಧಗಳನ್ನು ಗಟ್ಟಿಗೊಳಿಸುವ ಈ ಕಾರ್ಯ ಶ್ಲಾಘನೀಯವಾದುದು ಎಂದರು.

ಇನ್ನೊರ್ವ ಮುಖ್ಯ ಅತಿಥಿ ಮಂಜುನಾಥ ಬ್ಯಾಳಿ ಮಾತನಾಡಿ, ವಿದ್ಯಾರ್ಥಿಗಳು ತಂದೆ ತಾಯಿಗಳಿಗೆ ಗುರು ಹಿರಿಯರಿಗೆ ಗೌರವ ಕೊಡುವ ಸತ್ಸಂಪ್ರದಾಯ ರೂಢಿಸಿಕೊಳ್ಳಬೇಕು, ಅಂದಾಗ ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪುಷ್ಪ ನೀಡಿ ಬರಮಾಡಿಕೊಂಡರು.

ಕಾಲೇಜಿನ ಪ್ರಾಚಾರ್ಯ ಡಾ. ನಾಗರಾಜ ದ್ಯಾಮನಕೊಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕ ಕೆ.ಬಸಣ್ಣ, ಕೆ.ಎಸ್. ಬರದೆಲಿ, ಗೀತಾ ಸಾಲ್ಮನಿ, ಅನ್ನಪೂರ್ಣ ಅಂಕಲಕೋಟಿ, ಮಹೇಶ ಲಕ್ಷ್ಮೇಶ್ವರ ಹಾಗೂ ಮಂಜುನಾಥ ಕಾಳೆ ಮುಂತಾದವರು ಇದ್ದರು. ಪ್ರಾರಂಭದಲ್ಲಿ ಸಂಜನಾ ಪಾಟೀಲ ಸ್ವಾಗತಿಸಿದರು. ಕೊನೆಯಲ್ಲಿ ಪುಷ್ಟಾ ಮಠಪತಿ ವಂದಿಸಿದರು. ಬನಶ್ರೀ ಹುತ್ತನಗೌಡ್ರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''