ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ರಾ.ಸೇ.ಯೋಜನೆ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಕಾಲೇಜಿನ ವಿವಿಧ ವೇದಿಕೆಗಳ ಸಮಾರೋಪದಲ್ಲಿ ಅವರು ಮಾತನಾಡಿ,
ನಾನು ಯಾವ ಕಾಲೇಜಿನ ಮೆಟ್ಟಿಲನ್ನೂ ಹತ್ತಿಲ್ಲ, ಯಾವ ವಿಶ್ವವಿದ್ಯಾನಿಲಯದಲ್ಲೂ ಓದಿಲ್ಲ. ಆದರೆ, ನನ್ನೊಳಗಿನ ನನ್ನ ಕಲೆ ಕಾಲೇಜಿನ ಮೆಟ್ಟಿಲನ್ನು ಹತ್ತಿಸಿದೆ. ಗೌರವ ಡಾಕ್ಟರೇಟ್ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ನೀಡುವಂತೆ ಮಾಡಿದೆ. ಇಡ್ಲಿ ಮಾರಿ ಜೀವನ ಸಾಗಿಸಿ ಜೀವನವನ್ನು ಅರ್ಥ ಮಾಡಿಕೊಂಡಿದ್ದೇನೆ. ನಾನು ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದ್ದು ನನ್ನ ಗುರುಗಳಾದ ಕಾಳವ್ವ ಜೋಗತಿ ಎಂದು ಸ್ಮರಿಸಿದರಲ್ಲದೆ, ಹೆತ್ತ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ. ಒಳ್ಳೆಯ ಗುರಿ ಉದ್ದೇಶಗಳನ್ನು ಇಟ್ಟುಕೊಳ್ಳಬೇಕು. ಮೊದಲು ನಾನು ಸರಿ ಇರಬೇಕು. ಮಾನವರಾಗಿ ಯೋಚಿಸುವುದನ್ನು ಕಲಿಯಬೇಕು ಮತ್ತು ಅದರಂತೆ ನಡೆಯಬೇಕು ಎಂದು ಕಿವಿಮಾತು ಹೇಳಿದರು.ನಮ್ಮ ಸಂಸ್ಕೃತಿ ಪರಂಪರೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಗಳನ್ನ ಅರಿಯಬೇಕು. ಮೊಬೈಲು ನಿಮ್ಮನ್ನು ಜೀವನದಲ್ಲಿ ತಲೆತಗ್ಗಿಸು ವಂತೆ ಮಾಡುತ್ತದೆ. ಅದೇ ಪುಸ್ತಕ ನಿಮ್ಮನ್ನು ಜೀವನದಲ್ಲಿ ತಲೆಯೆತ್ತುವಂತೆ ಮಾಡುತ್ತದೆ. ದೇವರು ದೇವಸ್ಥಾನದಲ್ಲಿ ಇಲ್ಲ, ನಾವು ಮಾಡುವ ಕರ್ತವ್ಯದಲ್ಲಿದ್ದಾನೆ. ಎಲ್ಲರ ಆಂತರ್ಯದಲ್ಲೂ ಪರಮಾತ್ಮ ಇರುತ್ತಾನೆ. ಯಾರ ಮನಸ್ಸನ್ನು ನಾವು ನೋಯಿಸದಂತೆ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಕಾಲೇಜು ಶಿಕಣ ಇಲಾಖೆಯ ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕರಾದ ಪ್ರೊ.ವಿಷ್ಣುಮೂರ್ತಿ ಮಾತನಾಡಿ, ಯವಜನತೆ ಉತ್ತಮ ದೇಹಬಲದ ಜೊತೆಗೆ ಮನೋಬಲವನ್ನು ಹೊಂದಿರಬೇಕು. ನೈತಿಕತೆ ಮತ್ತು ಪ್ರಾಮಾಣಿಕತೆಯ ಹಾದಿಯಲ್ಲಿ ಸಾಗುವುದರಿಂದ ಉತ್ತಮ ನಾಳೆಗಳು ನಿಮ್ಮದಾಗುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಜಿ.ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಸಕ್ರೀನಾಯ್ಕ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು.