ಮುಂಡರಗಿ: ಕ್ರೀಡಾಪಟುಗಳಿಗೆ ಆಟ ಮತ್ತು ನೋಟ ಚೆನ್ನಾಗಿದ್ದರೆ ಎಲ್ಲದರಲ್ಲಿಯೂ ಯಶಸ್ಸು ಸಾಧಿಸಲು ಸುಲಭವಾಗುತ್ತದೆ ಎಂದು ನಾಡೋಜ ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗೇಶ ಹುಬ್ಬಳ್ಳಿ, ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ, ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ಮಾತನಾಡಿದರು.
ಕಾಲೇಜು ಮೇಲ್ವಿಚಾರಣಾ ಸಮಿತಿಯ ಕಾರ್ಯಾಧ್ಯಕ್ಷ ಪ್ರೊ. ಆರ್.ಎಲ್. ಪೊಲೀಸ್ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಟಗಳು ಕೇವಲ ಗೆಲುವಿಗಾಗಿ, ಬಹುಮಾನಕ್ಕಾಗಿ ಮಾತ್ರವಲ್ಲ. ಎಲ್ಲರೊಂದಿಗೂ ಸಾಮರಸ್ಯ ಬೆಳೆಸುವುದಕ್ಕಾಗಿ ಆಟೋಟಗಳು ಸೇರಿದಂತೆ ಅನೇಕ ಸಾಂಸ್ಕೃತಿಕ ಚಟುವಟಿಕೆ ಇರಬೇಕು. ವಿದ್ಯಾ ಸಮಿತಿ ಶತಮಾನೋತ್ಸವದ ಅಂಗವಾಗಿ ಶ್ರೀಗಳ ಆಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದರು.ಬಹುಮಾನದ ಪ್ರಾಯೋಜಕರಾದ ಆರ್.ಎಲ್. ಪೊಲೀಸ್ಪಾಟೀಲ್, ಎ.ಡಿ. ಬಂಡಿ, ಗಿರೀಶ ಅಂಗಡಿ, ಜಯಣ್ಣ ಗುಜ್ಜರ ಮತ್ತು ಕೊಟಕ್ ಮಹೀಂದ್ರಾ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಜ್ಯೋತಿಬಾ ಫರೀಟ್ ಅವರನ್ನು ಸನ್ಮಾನಿಸಲಾಯಿತು. ವಿ.ಎಫ್. ಗುಡದಪ್ಪನವರ, ಡಾ. ಡಿ.ಸಿ. ಮಠ, ಮಂಜುನಾಥ ಇಟಗಿ, ವೀರೇಶ ಸಜ್ಜನರ, ಉಮೆಶ ಹಿರೇಮಠ, ಪ್ರಾಚಾರ್ಯ ಡಾ. ಸಂತೋಷ ಹಿರೇಮಠ, ಡಾ. ಮನೋಜ ಕೋಪರ್ಡೆ ಉಪಸ್ಥಿತರಿದ್ದರು. ಈ ವಾಲಿಬಾಲ್ ಪಂದ್ಯಾವಳಿಯಲ್ಲಿ ಒಟ್ಟು 11 ತಂಡಗಳು ಪಾಲ್ಗೊಂಡಿದ್ದವು. ಡಾ. ಆರ್.ಎಚ್. ಜಂಗಣವಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.