ಪ್ರತಿ ಕೆಲಸದಲ್ಲೂ ಆತ್ಮವಿಶ್ವಾಸ ಹೊಂದಿದರೆ ಯಶಸ್ಸು ಸಾಧ್ಯ: ಉಪೇಂದ್ರ ಪ್ರತಾಪ್‌ ಸಿಂಗ್‌

KannadaprabhaNewsNetwork |  
Published : Nov 30, 2024, 12:46 AM IST
ಚಿಕ್ಕಮಗಳೂರಿನ ಎಐಟಿ ಕಾಲೇಜಿನಲ್ಲಿ ನಡೆದ ಚುಂಚನೋತ್ಸವದಲ್ಲಿ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಾ. ಸಿ.ಕೆ. ಸುಬ್ಬರಾಯ, ಡಾ. ಸಿ.ಟಿ. ಜಯದೇವ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಶ್ರಮ, ಶ್ರದ್ಧೆ ಇತರರಿಗಿಂತ ವಿಶೇಷವಾಗಿ ತಾರ್ಕಿಕ ಚಿಂತನೆ ಯಶಸ್ಸಿಗೆ ಸಹಕರಿಸುತ್ತವೆ. ಪ್ರತಿ ಕೆಲಸದ ಮೇಲೆ ನಂಬಿಕೆ ಆತ್ಮವಿಶ್ವಾಸ ಹೊಂದಬೇಕು ಎಂದು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಹೇಳಿದರು.

ಎಐಟಿ ಕಾಲೇಜಿನಲ್ಲಿ ಚುಂಚನೋತ್ಸವಕ್ಕೆ ತೆರೆ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶ್ರಮ, ಶ್ರದ್ಧೆ ಇತರರಿಗಿಂತ ವಿಶೇಷವಾಗಿ ತಾರ್ಕಿಕ ಚಿಂತನೆ ಯಶಸ್ಸಿಗೆ ಸಹಕರಿಸುತ್ತವೆ. ಪ್ರತಿ ಕೆಲಸದ ಮೇಲೆ ನಂಬಿಕೆ ಆತ್ಮವಿಶ್ವಾಸ ಹೊಂದಬೇಕು ಎಂದು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಹೇಳಿದರು.

ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಚುಂಚನ- 2024ರ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಕಠಿಣ ಶ್ರಮ, ಶ್ರದ್ಧೆ ಮತ್ತು ಆತ್ಮವಿಶ್ವಾಸ ಯಶಸ್ಸಿನ ಮೆಟ್ಟಿಲು ಗಳಾಗಿವೆ. ನಿಮ್ಮ ಸಾಧನೆಯೆಡೆಗೆ ಗುರಿ ಮಾಡಿ ನಿಂತರೆ ಸಾಗುವ ದಾರಿಯಲ್ಲಿ ಬರುವ ಯಾವುದೇ ಅಡೆ ತಡೆಗಳಿಗೆ ಗಮನ ಹರಿಸದೆ ಸ್ಥಿರತೆಯಿಂದ ಇರಬೇಕು. ಸಾಮಾಜಿಕ ಜಾಲತಾಣವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಒಳ್ಳೆಯ ಪುಸ್ತಕ ಗಳನ್ನು ಓದಿ ಮಾನಸಿಕ ಹಾಗೂ ಬುದ್ಧಿ ಚುರುಕುಗೊಳಿಸಬೇಕು ಎಂದರು.

ತಮ್ಮಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ತೋರ್ಪಡಿಸಲು ಇದು ಉತ್ತಮ ವೇದಿಕೆ. ಸ್ಪರ್ಧಾ ಮನೋಭಾವದಿಂದ ಭಾಗಿ ಯಾಗುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗಿ ನಾಯಕತ್ವದ ಗುಣ ಬೆಳೆಯಲಿದೆ ಎಂದರು.

ಸ್ಪರ್ಧೆಗಳಲ್ಲಿ ಸೋಲು, ಗೆಲುವು ನಿಶ್ಚಿತವಾದುದು. ಗೆದ್ದವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲವಾದರೆ, ಸೋತವರಿಗೆ ಇನ್ನು ಹೆಚ್ಚು ಶ್ರಮ ವಹಿಸುವಂತೆ ಅನುಭವ ದೊರಕುತ್ತದೆ. ಯಾರು ಆತ್ಮವಿಶ್ವಾಸದಿಂದ ಉತ್ತಮ ಅಭ್ಯಾಸದೊಂದಿಗೆ ಪ್ರತಿಭೆ ಹೊರ ಹಾಕುತ್ತಾರೋ ಅಂತಹ ಸ್ಪರ್ಧಿಗಳಿಗೆ ಗೆಲುವು ಖಚಿತ ಎಂದು ತಿಳಿಸಿದರು.

ಆದಿಚುಂಚನಗಿರಿ ಮಹಾವಿದ್ಯಾಲಯದ ರಿಜಿಸ್ಟ್ರಾರ್ ಡಾ. ಸಿ.ಕೆ.ಸುಬ್ಬರಾಯ ಮಾತನಾಡಿ, ಜಯವು ಕೇವಲ ಪ್ರಶಸ್ತಿ, ಪದಕಗಳಿಗೆ ಸೀಮಿತವಾಗಬಾರದು, ಮುಂದೆ ಸಾಗಲು ದಾರಿಯಾಗಬೇಕು. ವಿದ್ಯಾರ್ಥಿ ದಿನಗಳಲ್ಲಿ ತಮಗಿರುವ ಸ್ವಾತಂತ್ರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಹೊಸತನ್ನು ಕಲಿತು ಸಾಧನೆಯೆಡೆಗೆ ಸಾಗಬೇಕು ಎಂದರು.

ಚುಂಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಅನುಭವದಿಂದ ಹೊರ ಬಂದಿದ್ದಾರೆ. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ವಿದ್ಯಾರ್ಥಿಗಳು ಒತ್ತಡದಿಂದ ಮುಕ್ತರಾಗಲು ಸಹಕರಿಸುತ್ತವೆ. ಉತ್ತಮ ಶ್ರಮ ಮತ್ತು ಸಾಮರ್ಥ್ಯ ದಿಂದ ತಮ್ಮಲಿರುವ ಪ್ರತಿಭೆ ಗುರುತಿಸಿ ಸಮಾಜಕ್ಕೆ ಪರಿಚಯಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ್ ಮಾತನಾಡಿ, ಶ್ರದ್ಧೆ ಭಕ್ತಿ ಯಿಂದ ಮಾಡಿದ ಪ್ರತಿಯೊಂದು ಕಾರ್ಯ ಪೂರ್ಣಗೊಂಡು ಯಶಸ್ಸು ಕಾಣಲು ಸಾಧ್ಯ ಎಂದರು.ಕಾಲೇಜಿನಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಐಟಿ ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಮುಖ್ಯಸ್ಥ ಜಿ.ಎಂ.ಸತ್ಯನಾರಾಯಣ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಉಪಸ್ಥಿತರಿದ್ದರು. 29 ಕೆಸಿಕೆಎಂ 2ಚಿಕ್ಕಮಗಳೂರಿನ ಎಐಟಿ ಕಾಲೇಜಿನಲ್ಲಿ ನಡೆದ ಚುಂಚನೋತ್ಸವದಲ್ಲಿ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಾ. ಸಿ.ಕೆ. ಸುಬ್ಬರಾಯ, ಡಾ. ಸಿ.ಟಿ. ಜಯದೇವ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ