ಏಕಾಗ್ರತೆಯ ಅಧ್ಯಯನದಿಂದ ಯಶಸ್ಸು ಸಾಧ್ಯ

KannadaprabhaNewsNetwork |  
Published : Dec 18, 2025, 02:15 AM IST
೧೭ ವೈಎಲ್‌ಬಿ ೦೨ಯಲಬುರ್ಗಾದ ಸ್ನಾತಕೋತ್ತರ ಕೇಂದ್ರದಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಅಭ್ಯುದಯ ಹೆಸರಿನಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಡಾ.ಬಿ.ಆರ್.‌ ಅಂಬೇಡ್ಕರ್‌, ಡಾ. ಎಪಿಜೆ ಅಬ್ದುಲ್‌ ಕಲಾಂ, ಸಿದ್ದಯ್ಯ ಪುರಾಣಿಕರಂತಹ ಮಹನೀಯರನ್ನು ವಿದ್ಯಾರ್ಥಿಗಳು ಆದರ್ಶವಾಗಿ ಇಟ್ಟುಕೊಳ್ಳಬೇಕು

ಯಲಬುರ್ಗಾ: ಏಕಾಗ್ರತೆಯಿಂದ ಅಧ್ಯಯನ ಮಾಡದೇ ಜೀವನದಲ್ಲಿ ಯಶಸ್ಸು ಸಾಧಿಸಲು ಅಸಾಧ್ಯ ಎಂದು ಕೊಪ್ಪಳ ವಿವಿ ಕುಲಸಚಿವ ಎಸ್.ವಿ. ಡಾಣಿ ಹೇಳಿದರು.

ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಗಣಿತಶಾಸ್ತ್ರ ವಿಭಾಗದಿಂದ ನಡೆದ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಅಭ್ಯುದಯ ಹೆಸರಿನಲ್ಲಿ ನಡೆದ ಸ್ವಾಗತ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಡಾ.ಬಿ.ಆರ್.‌ ಅಂಬೇಡ್ಕರ್‌, ಡಾ. ಎಪಿಜೆ ಅಬ್ದುಲ್‌ ಕಲಾಂ, ಸಿದ್ದಯ್ಯ ಪುರಾಣಿಕರಂತಹ ಮಹನೀಯರನ್ನು ವಿದ್ಯಾರ್ಥಿಗಳು ಆದರ್ಶವಾಗಿ ಇಟ್ಟುಕೊಳ್ಳಬೇಕು. ಏಕಾಗ್ರಚಿತ್ತದಿಂದ ಓದದೆ ಯಾರೊಬ್ಬರೂ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಏಕಾಗ್ರಚಿತ್ತದಿಂದ ವ್ಯಾಸಂಗ ಮಾಡುವ ಮೂಲಕ ಬದುಕಿನಲ್ಲಿ ಅಭ್ಯುದಯ ಕಾಣಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊಪ್ಪಳ ವಿಶ್ವವಿದ್ಯಾಲಯವು ಈ ಭಾಗದ ವಿದ್ಯಾರ್ಥಿಗಳಿಗೆ ಮರುಭೂಮಿಯಲ್ಲಿ ಓಯಾಸಿಸ್‌ ಸಿಕ್ಕ ಹಾಗೇ ಆಗಿದೆ. ಹೀಗಾಗಿ ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಜಾಗತಿಕ ಸಂಗತಿ ಕಲಿಯುವುದಕ್ಕೆ ಪ್ರೇರಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಅಂತರ್ಜಾಲದ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದರು.

ಡಾ. ರವೀಂದ್ರ, ಡಾ. ನಾಗಪ್ಪ ಹೂವಿನಭಾವಿ ಮಾತನಾಡಿದರು.

ಪಿಜಿ ಸೆಂಟರ್‌ನ ಆಡಳಿತಾಧಿಕಾರಿ ಕೆ.ಎಚ್.ಛತ್ರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಅಂಬಿಕಾ, ಮಹ್ಮದ ಮನ್ಸುರ್, ಮುತ್ತಪ್ಪ ದೇವರಮನಿ, ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ