ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

KannadaprabhaNewsNetwork |  
Published : Apr 03, 2025, 02:45 AM IST
ಕೆಎಲ್‌ಇ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ವ್ಯಕ್ತಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರರೇವಿಸಲಾಯಿತು | Kannada Prabha

ಸಾರಾಂಶ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾಡಿವೈಸ್ ಮೂಲಕ ಪಲ್ಮನರಿ ಮೆಕ್ಯಾನಿಕಲ್‌ ಥ್ರೊಂಬೋಕ್ಟಮಿ ಚಿಕಿತ್ಸಾ ಪ್ರಕ್ರಿಯೆ ನಡೆಸಿ ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ಹೃದಯತಜ್ಞ ವೈದ್ಯರು ಯಶಸ್ವಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾಡಿವೈಸ್ ಮೂಲಕ ಪಲ್ಮನರಿ ಮೆಕ್ಯಾನಿಕಲ್‌ ಥ್ರೊಂಬೋಕ್ಟಮಿ ಚಿಕಿತ್ಸಾ ಪ್ರಕ್ರಿಯೆ ನಡೆಸಿ ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ಹೃದಯತಜ್ಞ ವೈದ್ಯರು ಯಶಸ್ವಿಯಾಗಿದ್ದಾರೆ.

ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ 31 ವರ್ಷದ ವ್ಯಕ್ತಿಯಕಾಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿದ್ದ ( ಡೀಪ್ ವೇನ್ ಥ್ರಂಬೋಸಿಸ್) ರಕ್ತವು ಶ್ವಾಸಕೋಶಕ್ಕೆ(ಮಾಸಿವ್ ಪಲ್ಮನರಿ ಎಂಬಾಲಿಸಮ್) ಸಂಚರಿಸಿದ ಕಾರಣಕಡಿಮೆರಕ್ತದೊತ್ತಡದೊಂದಿಗೆತೀವ್ರವಾದ ಉಸಿರಾಟದ ತೊಂದರೆಅನುಭವಿಸುತ್ತಿದ್ದರು.ಆಸ್ಪತ್ರೆಗೆ ಆಗಮಿಸಿದ ಕೂಡಲೇ ಅತ್ಯಂತ ತುರ್ತಾಗಿ ಪೆನಂಬ್ರಾಡಿವೈಸ್ ಮೂಲಕ ಪಲ್ಮನರಿ ಮೆಕ್ಯಾನಿಕಲ್‌ ಥ್ರಂಬೋಕ್ಟಮಿ ಚಿಕಿತ್ಸಾ ಪ್ರಕ್ರಿಯೆಯನ್ನು ಹೃದಯರೋಗ ತಜ್ಞ ವೈದ್ಯ ರಾದ ಡಾ.ಸಮೀರ್‌ ಅಂಬರ ಹಾಗೂ ಡಾ.ಸಂಜಯ್ ಪೋರವಾಲ್‌ ಅವರು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಅತ್ಯಂತ ಕ್ಲಿಷ್ಕರವಾದ ಈ ಚಿಕಿತ್ಸಾ ಪ್ರಕ್ರಿಯೆಗೆ ಹಿರಿಯ ತಜ್ಞ ವೈದ್ಯರಾದ ಡಾ.ಎಸ್ ವಿ ಪಟ್ಟೇದ, ಡಾ.ವಿಜಯ್ ಮೆಟಗುಡಮಠ, ಡಾ.ಪ್ರಸಾದ್.ಎಂ.ಆರ್‌ ಹಾಗೂ ಡಾ.ವಿಶ್ವನಾಥ್ ಹೆಸರೂರ ಸಹಕರಿಸಿದರು. ಚಿಕಿತ್ಸಾ ಪ್ರಕ್ರಿಯೆ ಎರಡು ದಿನಗಳ ನಂತರರೋಗಿಯು ಸಂಪೂರ್ಣವಾಗಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಪಲ್ಮನರಿ ಎಂಬಾಲಿಸಮ್‌ಎನ್ನುವುದು ಗಂಭೀರ ಪರಿಸ್ಥಿತಿಯಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಯಿಂದ ಶ್ವಾಸಕೋಶಕ್ಕೆ ರಕ್ತ ಸಂಚಾರದಲ್ಲಿ ತೊಂದರೆಯುಂಟಾಗುತ್ತದೆ. ಅಫಧಮನಿಗಳಲ್ಲಿನ ರಕ್ತಹೆಪ್ಪು ಗಟ್ಟುವಿಕೆಯನ್ನು ಶೀಘ್ರವೇ ಕಂಡು ಹಿಡಿದುಸೂಕ್ತ ಚಿಕಿತ್ಸೆ ನೀಡದಿದ್ದರೆ, ಸಾವು ಸಂಭವಿಸುವ ಸಾಧ್ಯತೆ ಅಧಿಕವಾಗಿರುತ್ತದೆ. ಕಾಲಿನ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯು ಶ್ವಾಸಕೋಶಕ್ಕೆ ಸಂಚರಿಸುವ ಸಾಧ್ಯತೆ ಸಾಮಾನ್ಯ. ಸಾಮಾನ್ಯವಾಗಿ ಕ್ಯಾನ್ಸರ್ ರೋಗಿಗಳಲ್ಲಿ, ಯಾವುದಾದರೂ ಶಸ್ತ್ರ ಚಿಕಿತ್ಸೆ ನೆರವೇರಿಸಿದಾಗ, ದೀರ್ಘಕಾಲದಿಂದ ಹಾಸಿಗೆಯಲ್ಲಿರುವ ರೋಗಿಗಳು, ನಿರಂತರ ಸ್ಟೀರಾಯ್ಡ್, ತಂಬಾಕು ಸೇವನೆಯು ಡೀಪ್ ವೇನ್ ಥ್ರಂಬೋಸಿಸಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ರೋಗಿಗಳು ಕಾಲು ನೋವು ಮತ್ತು ಉಸಿರಾಟದ ತೊಂದರೆಯೊಂದಿಗೆ ಕಾಲಿನಲ್ಲಿ ಭಾವುಕಂಡು ಬರುತ್ತದೆ.

ಅತ್ಯಾಧುನಿಕ ತಂತ್ರಜ್ಞಾನವಾದ ಪೆನುಂಬ್ರಾಕೃತಕ ಬುದ್ದಿಮತ್ತೆ ಚಾಲಿತ ವ್ಯವಸ್ಥೆಯಾಗಿದ್ದು, ಎಂಡೋವಾಸ್ಕುಲರ್ ಕಾರ್ಯವಿಧಾನಗಳಲ್ಲಿ ಹೆಪ್ಪುಗಟ್ಟುವಿಕೆಯನ್ನುತೆಗೆಯಲು ಸಹಕರಿಸುತ್ತದೆ. ಯಶಸ್ವಿ ಚಿಕಿತ್ಸಾ ಪ್ರಕ್ರಿಯೆ ನಡೆಸಿದ ವೈದ್ಯರ ತಂಡವನ್ನು ಕೆಎಲ್‌ಇ ಸಂಸ್ಥೆಯ ಕಾರ‍್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.(ಕರ್ನಲ) ಎಂ.ದಯಾನಂದ ಅಭಿನಂಧಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ