ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವೈದ್ಯವಿಜ್ಞಾನದ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಅದಕ್ಕೆ ತಕ್ಕಂತೆ ಆಸ್ಪತ್ರೆಗಳೂ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿವೆ. ವೈದ್ಯ ವಿಜ್ಞಾನದಲ್ಲಿ ನಿಖರ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು ರೊಬೊಟಿಕ್ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಿದೆ ಎಂದು ವಿಶ್ಲೇಷಿಸಿದರು.
ಇಬ್ಬರು ರೋಗಿಗಳಿಗೆ ಶಸ್ತ್ರಚಿಕಿತ್ಸೆ:ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಅಳವಡಿಸಿಕೊಂಡಿದೆ. ಭಾರತದಲ್ಲಿಯೇ ತಯಾರಿಸಿದ ಎಸ್ಎಸ್ಐ ತಂತ್ರಜ್ಞಾನ ಸರ್ಜಿಕಲ್ ರೊಬೊಟಿಕ್ ಇದಾಗಿದೆ. ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಸಹಕಾರಿಯಾಗಿದೆ. ರೊಬೊಟಿಕ್ ತಂತ್ರಜ್ಞಾನದಿಂದ ಇಬ್ಬರು ಕ್ಯಾನ್ಸರ್ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಅನ್ನನಾಳ ಕ್ಯಾನ್ಸರ್ನಿಂದ ಬಳಲುತ್ತಿದ್ದ 62 ವರ್ಷ ಮತ್ತು 70 ವರ್ಷದ ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ.ಮಹೇಶ ಕಲ್ಲೋಳ್ಳಿ, ಡಾ.ಕುಮಾರ ವಿಂಚುರಕರ ಹಾಗೂ ಡಾ.ದಿವಾಕರ, ಡಾ.ರಾಹುಲ್ ಕಿನವಾಡೆಕರ ಅವರಿಗೆ ಅರಿವಳಿಕೆ ತಜ್ಞವೈದ್ಯ ಡಾ.ರಾಜೇಶ ಮಾನೆ ಸಹಕರಿಸಿರುವುದಾಗಿ ಮಾಹಿತಿ ನೀಡಿದರು.
----------------------------------
ಮೂರು ದಶಕಗಳ ಹಿಂದೆ ವೈದ್ಯವಿಜ್ಞಾನದ ತಂತ್ರಜ್ಞಾನಕ್ಕೆ ಪರಿಚಿತವಾದ ರೊಬೊಟಿಕ್ ಇಂದು ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಶಸ್ತ್ರಚಿಕಿತ್ಸೆಯಲ್ಲಿ ಅದ್ಭುತ ಕೊಡುಗೆ ನೀಡುತ್ತ ನಿರಂತರ ಅಭಿವೃದ್ಧಿಗೊಳ್ಳುತ್ತಿದೆ. ರೊಬೊಟಿಕ್ನಿಂದ ವೈದ್ಯರು ಅತ್ಯಂತ ಕ್ಲಿಷ್ಟಕರವಾದ ಹಾಗೂ ಸಂಕೀರ್ಣತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಇದು ಸಹಕಾರಿಯಾಗಲಿದೆ.
--------------------------
ರೊಬೊಟಿಕ್ ಚಿಕಿತ್ಸೆ ಹೇಗೆ...?
ತೆರೆದ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಹೋಲಿಸಿದರೆ ರೊಬೊಟಿಕ್ ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳಲ್ಲಿ ಸೋಂಕಿನ ಅಪಾಯ ಕಡಿಮೆ. ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು. ಅಲ್ಲದೇ ಲ್ಯಾಪ್ರೋಸ್ಕೋಪಿಕ್ ಮತ್ತು ತೆರೆದ ಶಸ್ತ್ರಚಿಕಿತ್ಸಾ ವಿಧಾನಗಳಿಗಿಂತ ಹೆಚ್ಚಿನ ಸಂದರ್ಭಗಳಲ್ಲಿ ಇದನ್ನು ಆದ್ಯತೆಯನ್ನಾಗಿ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ರೊಬೊಟಿಕ್ ಶಸ್ತ್ರಚಿಕಿತ್ಸೆಯು ರೋಗಿಗಳ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರಿದರೂ ಮೂಲಸೌಕರ್ಯ, ಉಪಕರಣಗಳ ಆಮದು ವೆಚ್ಚದಿಂದಾಗಿ ಈ ತಂತ್ರಜ್ಞಾನ ಬಳಕೆ ನಿಧಾನಗತಿಯಲ್ಲಿದೆ ಎಂದು ವಿವರಿಸಿದರು.