ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ದಿಢೀರ್‌ ದಾಳಿ

KannadaprabhaNewsNetwork |  
Published : Aug 29, 2024, 12:51 AM IST
ಪೊಟೋ: 28ಎಸ್ಎಂಜಿಕೆಪಿ05ಶಿವಮೊಗ್ಗ ಹೊರವಲಯ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲಿಸಲಾಯಿತು. | Kannada Prabha

ಸಾರಾಂಶ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗುವ ಮುನ್ನವೇ ಸೆಂಟ್ರಲ್ ಜೈಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗದ ಹೊರವಲಯ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದ ತಂಡ ಗುರುವಾರ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗುವ ಮುನ್ನವೇ ಸೆಂಟ್ರಲ್ ಜೈಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.

ಗುರುವಾರ ಬೆಳಗ್ಗೆ 5 ಗಂಟೆಗೆ ದಾಳಿ ನಡೆಸಲಾಗಿದ್ದು, ಸುಮಾರು 5 ಗಂಟೆಗಳ ಕಾಲ ಜೈಲಿನ ಪ್ರತಿ ಬ್ಯಾರಕ್ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಪರಿಶೀಲನೆ ನಡೆಸ ಲಾಗಿದೆ. ಜೈಲ್‌ನಲ್ಲಿ ನಿಷೇದಿತ ವಸ್ತುಗಳಾದ ಗಾಂಜಾ, ತಂಬಾಕು ಸೇರಿದಂತೆ ಮೊಬೈಲ್ ಇರುವ ಕುರಿತು ತಲಾಷ್ ಮಾಡಲಾಗಿದೆ. ಆದರೆ, ದಾಳಿಯ ವೇಳೆ ಯಾವುದೇ ವಸ್ತುಗಳು ಲಭ್ಯವಾಗಿಲ್ಲ ಎಂಬುದು ತಿಳಿದು ಬಂದಿದೆ.

ಇನ್ನು, ಈ ದಾಳಿಯನ್ನು ಕಳೆದ ವಾರ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ದ್ವಿತೀಯ ಪುತ್ರ ಬಸವೇಶ್ ಅವರ ಮೇಲೆ ನಡೆದ ಕೊಲೆ ಯತ್ನದ ಹಿನ್ನೆಲೆ ಯಲ್ಲಿ ದಾಳಿ ನಡೆಸಿರಬಹುದಾಗಿದೆ ಎನ್ನಲಾಗುತ್ತಿದೆ. ಬಸವೇಶ್ ಕೊಲೆಗೆ ಜೈಲ್‌ನಿಂದ ಸುಪಾರಿ ನೀಡಲಾಗಿತ್ತು ಎಂದು ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

----------------

ಪೊಟೋ: 28ಎಸ್ಎಂಜಿಕೆಪಿ05

ಶಿವಮೊಗ್ಗ ಹೊರವಲಯ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು