ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಮೃಂತ್ಯುಜಯ ನದಿ ಉಗಮ ಸ್ಥಾನದಲ್ಲಿ ಮಳೆ ಬಿದ್ದ ಪರಿಣಾಮ ಭಾರೀ ನೀರು ಬಂದು ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಹರಿದಿದೆ. ಕೆಸರು ಮಿಶ್ರಿತ ನೀರು ಮಾತ್ರವಲ್ಲದೆ ದೊಡ್ಡ ಕಲ್ಲುಗಳು, ಮರಮಟ್ಟುಗಳೂ, ಕೆಸರು ರಸ್ತೆಗೆ ಬಿದ್ದಿದೆ. ಇದರಿಂದ ಸಂಜೆ ವೇಳೆ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಮೃತ್ಯುಂಜಯ ನದಿ ತೀರದಲ್ಲಿರುವ ಅಡಕೆ ತೋಟಗಳಿಗೆ ಮಂಗಳವಾರವೂ ನೀರು ನುಗ್ಗಿದು ಕಂಡುಬಂತು. ಮಳೆಯೇ ಇಲ್ಲದಿದ್ದರೂ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿರುವುದು ನದಿ ದಡದಲ್ಲಿರುವ ನಿವಾಸಿಗಳು ಕಂಗಾಲಾಗಿದ್ದಾರೆ.
ನೇತ್ರಾವತಿಯಲ್ಲಿ ಸೋಮವಾರ ಸಂಜೆ ಭಾರಿ ನೀರು ಕಂಡುಬಂದು 2019ರ ಚಿತ್ರಣ ಮತ್ತೆ ಮರುಕಳಿಸಬಹುದೇನೋ ಎಂಬ ಆತಂಕ ಮೂಡಿತ್ತು. ನದಿ ದಡದಲ್ಲಿದ್ದ ಕೆಲ ಜನರನ್ನು ಸ್ಥಳಾಂತರವೂ ಮಾಡಲಾಗಿತ್ತು. ಆದರೆ ಮಂಗಳವಾರ ನೇತ್ರಾವತಿ ಶಾಂತವಾಗಿ ಹರಿಯುತ್ತಿರುವುದು ಕಂಡು ಬಂತು. ಮೃತ್ಯುಂಜಯ ನದಿ ಮಾತ್ರ ಸಂಜೆ ಉಕ್ಕಿ ಹರಿದಿದ್ದರೂ ರಾತ್ರಿ ವೇಳೆ ನೀರಿನ ಮಟ್ಟ ತಗ್ಗಿದೆ. ಬಂಡಾಜೆ ಹಳ್ಳದಿಂದ ಕೆಸರು ಮಿಶ್ರಿತ ನೀರು ಬಂದಿದೆ.