ಧಾರವಾಡ: ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿರುವ ಪಿಓಪಿ ಪತ್ತೆ ಕಾರ್ಯಪಡೆಯಿಂದ ಗರಗ ಗ್ರಾಮದಲ್ಲಿ ಸೋಮವಾರ ಸಂಜೆ ದಿಢೀರ್ ದಾಳಿ ಮಾಡಿ, ಅಪಾರ ಪ್ರಮಾಣದ ಪಿಓಪಿ ಗಣಪತಿ ವಿಗ್ರಹಗಳನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಕಲಾಭವನ ಮೈದಾನದಲ್ಲಿ, ದಾಳಿಯಲ್ಲಿ ವಶಪಡಿಸಿಕೊಂಡ ಪಿಓಪಿ ಗಣಪತಿ ವಿಗ್ರಹಗಳನ್ನು ದಾಸ್ತಾನಿಕರಿಸುವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕಳೆದ ವರ್ಷದಿಂದ ಜಿಲ್ಲೆಯಲ್ಲಿ ಪಿಓಪಿ ಗಣಪತಿ ವಿಗ್ರಹಗಳು ಜಿಲ್ಲೆಗೆ ಬರದಂತೆ ತಡೆಯಲು ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಗಡಿ ಭಾಗದಲ್ಲಿ ಮತ್ತು ಮಹಾನಗರದ ಗಡಿಗಳಲ್ಲಿ ಚೆಕ್ ಪೊಸ್ಟ್ ತೆರೆಯಲಾಗುತ್ತಿದೆ.ಹಬ್ಬದ ಸಂದರ್ಭದಲ್ಲಿ ಇಂತಹ ಪಿಓಪಿ ವಿಗ್ರಹಗಳನ್ನು ಜಿಲ್ಲೆಯ ಪ್ರವೇಶಕ್ಕೆ ಹಾಗೂ ಮಾರಾಟಕ್ಕೆ ಅವಕಾಶವಾಗುವುದಿಲ್ಲ ಎಂದು ಭಾವಿಸಿ, ಈಗಲೇ ಗ್ರಾಮೀಣ ಭಾಗದಲ್ಲಿ ಮತ್ತು ನಗರದ ಕೆಲವು ಪ್ರದೇಶಗಳಲ್ಲಿ ಪಿಓಪಿ ವಿಗ್ರಹ ಸಂಗ್ರಹ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ ಎಂದರು.
ಆರೋಪಿ ವಿನಾಯಕ ಪತ್ತಾರ ಎಂಬುವವರು ಪಿಓಪಿ ವಿಗ್ರಹಗಳ ಸಗಟು ಮತ್ತು ಬಿಡಿ ಮಾರಾಟಗಾರರು ಆಗಿದ್ದಾರೆ ಎಂಬುದು ತಿಳಿದು ಬಂದಿದೆ. ಈ ಎಲ್ಲ ಪಿಓಪಿ ವಿಗ್ರಹಗಳನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರದಿಂದ ತರಲಾಗಿತ್ತು ಎಂದು ಆರೋಪಿ ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾನೆ. ಈ ಕುರಿತು ಸೂಕ್ತ ತನಿಖೆ ಮಾಡಿ, ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಈ ವೇಳೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಹಿರಿಯ ಅಧಿಕಾರಿ ಜಗದೀಶ ಐ.ಎಚ್, ಗರಗ ಪಿಡಿಒ ಶಶಿಧರ ಗಂಧದ, ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಗಂಗಾಧರ ಮನಕಟ್ಟಿಮಠ, ಗರಗ ಪಿಎಸ್ ಐ ಸಿದ್ರಾಮ ಉನ್ನದ, ಗ್ರಾಮ ಆಡಳಿತ ಅಧಿಕಾರಿ ಮಹೇಶ ನಾಗವ್ವನವರ, ಮಾಲಿನ್ಯ ನಿಯಂತ್ರಣ ಮಂಡಳಿಯ ಸಿಬ್ಬಂದಿಗಳಾದ ಮುನಾಫ್ ಸೌದಾಗರ, ಶಶಿಧರ ಕೋಡಿಹಳ್ಳಿ, ವಿಠ್ಠಲ ದಂಡಿಗದಾಸರ ಇದ್ದರು.