ಹುಬ್ಬಳ್ಳಿ:
ಇಲ್ಲಿನ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದ ಮಾರ್ಗದ ರಸ್ತೆ ಸಂಚಾರವನ್ನು ಕೆಲಕಾಲ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಸಂಚಾರಕ್ಕೆ ತೊಂದರೆಯಾಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಜನತಾ ಬಜಾರ್ ಕಟ್ಟಡದ ಸುತ್ತಮುತ್ತ ಭದ್ರತೆ ಒದಗಿಸಿದ್ದರು. ಸಂಘದ ಕಚೇರಿಗೆ ಪ್ರವೇಶ ನಿಷೇಧಿಸಿದ್ದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ, ಸಂಘದ ಕಚೇರಿಗೆ ಪಾಲಿಕೆಯ ಅಧೀನದ ಜನತಾ ಬಜಾರ್ ಕಟ್ಟಡದ 3ನೇ ಮಹಡಿಯಲ್ಲಿ ಕೊಠಡಿ ನೀಡಲಾಗಿತ್ತು. ಅಲ್ಲದೇ, ಕೊಠಡಿಯ ನವೀಕರಣಕ್ಕೆ ನೀಡಿದ ₹3 ಲಕ್ಷ ಅನುದಾನದಲ್ಲಿ ನವೀಕರಿಸಲಾಗಿದೆ. ಪಾಲಿಕೆ ಅಧಿಕಾರಿಗಳು ಮಂಗಳವಾರ ಏಕಾಏಕಿ ಉದ್ಘಾಟನೆ ನಡೆಸದಂತೆ ತಡೆಹಿಡಿದು ಗೊಂದಲ ಸೃಷ್ಟಿಸಿದ್ದಾರೆ ಎಂದು ಕಿಡಿಕಾರಿದ ಅವರು, ಒಂದು ವಾರದಲ್ಲಿ ಆದೇಶ ಪ್ರತಿ ನೀಡದಿದ್ದರೆ, ಸ್ವಚ್ಛತಾ ಕಾರ್ಯ ಬಂದ್ ಮಾಡಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ನೂರಾರು ಪೌರಕಾರ್ಮಿಕರು ಪಾಲ್ಗೊಂಡಿದ್ದರು.