ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಗುರುವಾರ ಬೆಳಗ್ಗೆ ಮಹಾಲಿಂಗಪುರ ಬಳಿಯ ಸೋಮಯ್ಯ ಸಕ್ಕರೆ ಕಾರ್ಖಾನೆಯಲ್ಲಿ ಹೋಮ, ಹವನ ನಡೆಸಿ ಕೇನ್ ಕ್ಯಾರಿಯರ್ ಪೂಜೆಯೊಂದಿಗೆ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಲಾಗಿತ್ತು. ಮುಧೋಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಹಸ್ರಾರು ಹೋರಾಟಗಾರರು ಬಸ್ಗಳಲ್ಲಿ ಸಂಜೆ ಸಮೀರವಾಡಿಗೆ ಮುತ್ತಿಗೆ ಹಾಕಿ ಕಾರ್ಖಾನೆ ಒಳಗೆ ಹೋಗಲು ಗೇಟ್ ಮುಂದೆ ಸಾಲಾಗಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಬರುತ್ತಿದ್ದ ಟ್ರ್ಯಾಕ್ಟರ್ಗಳನ್ನು ನೆಲಕ್ಕುರುಳಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಘೋಷಣೆ ಕೂಗಿದ್ದಲ್ಲದೆ, ಕಾರ್ಖಾನೆಯ ಮುಂದಿನ ಗೇಟ್ ಬಂದ್ ಮಾಡಿ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಾರ್ಖಾನೆ ಸಿಬ್ಬಂದಿ ಸೇರಿ ಹಲವು ರೈತರೂ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಮಿಸಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಹತೋಟಿಗೆ ಪ್ರಯತ್ನಿಸಿದರು. ವಿಷಯ ತಿಳಿದು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಅಧಿಕಾರಿಗಳು, ಆಗ್ನಿಶಾಮಕ ದಳ, ಆಂಬ್ಯುಲೆನ್ಸ್ ಗಳು ಆಗಮಿಸಿದವು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ನಡೆಸಬೇಕಾಯಿತು. ಕಲ್ಲು ತೂರಾಟದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ ಜಿಡ್ಡಿ ಅವರಿಗೂ ಕಲ್ಲು ಏಟು ಬಿದ್ದು ಗಾಯಗೊಂಡಿದ್ದಾರೆ.
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಕಬ್ಬು ಹೊತ್ತಿ ಉರಿಯುತ್ತಿವೆ. ಆಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಸ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಸ್ಥಳದಿಂದ ಪ್ರತಿಭಟನಾಕಾರರು ಕಾಲ್ಕಿತ್ತಿದ್ದಾರೆ. ಕಾರ್ಖಾನೆ ಆವರಣದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕೆಲವು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹೊತ್ತಿಕೊಂಡಿದೆ.ಮೂರು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ: