ಕನ್ನಡಪ್ರಭ ವಾರ್ತೆ ತುರುವೇಕೆರೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರನ್ನು ಭೇಟಿ ಮಾಡಿ ತಾಲೂಕಿನಲ್ಲಿರುವ ವಿಶ್ವಕರ್ಮರ ಆರ್ಥಿಕ ಸ್ಥಿತಿಗತಿ, ಸಾಮಾಜಿಕ ಪರಿಸ್ಥಿತಿಗಳ ಅವಲೋಕನ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಸಮಾಜಕ್ಕೆ ಅತ್ಯಗತ್ಯವಾಗಿ ಬೇಕಿರುವ ಹಲವಾರು ಸೇವೆಗಳನ್ನು ನೀಡುತ್ತಿರುವ ವಿಶ್ವಕರ್ಮರ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕ್ಷೀಣ ಪರಿಸ್ಥಿತಿಯಲ್ಲಿದೆ. ರಾಜಕೀಯವಾಗಂತೂ ಇಲ್ಲವೇ ಇಲ್ಲ. ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆ ವೇಳೆ ನಮ್ಮ ಮತಪಡೆಯಲು ಮುಂದಾಗುತ್ತವೆ ಹೊರೆತು ನಮ್ಮನ್ನು ಉದ್ಧಾರ ಮಾಡುವ ಮನಸ್ಸು ಮಾಡಿಲ್ಲ ಎಂದರು.ಸದ್ಯದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ನಮ್ಮ ಸಮುದಾಯದವರ ಅಭಿವೃದ್ಧಿಗಾಗಿ ಸುಮಾರು ₹50 ಕೋಟಿ ನೀಡಿದೆ. ನಮ್ಮ ನಿಗಮದಲ್ಲಿ ಹಲವಾರು ಕಾರ್ಯಕ್ರಮಗಳು ಇವೆ. ಇವುಗಳನ್ನು ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಾದ್ಯಂತ ಇರುವ ಪ್ರತಿಯೊಬ್ಬ ವಿಶ್ವಕರ್ಮರಿಗೂ ತಿಳಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಜಿಲ್ಲಾ ಕೈಗಾರಿಕಾ ಅಧಿಕಾರಿಗಳ ಸಂಪರ್ಕಗಳಿಸಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಗಳಿಸಲು ಮುಂದಾಗಿ. ಮಹಿಳೆಯರಿಗೆ ಎಲೆಕ್ಟ್ರಾನಿಕ್ ಹೊಲಿಗೆ ಯಂತ್ರಗಳನ್ನು ನೀಡಲು ನಿಗಮ ಮುಂದಾಗಿದೆ. ನಮ್ಮ ಸಮುದಾಯದವರಿಗೆ ಗಂಗಾಕಲ್ಯಾಣ ಯೋಜನೆಯಲ್ಲಿ ಬೋರ್ ವೆಲ್ ದೊರೆಯಲಿದೆ. ಸಾರಥಿ ಯೋಜನೆಯಡಿ ವಾಹನಗಳನ್ನು ಕೊಳ್ಳಬಹುದಾಗಿದೆ. ಅರಿವು ಯೋಜನೆಯಡಿ ಕುಲ ಕಸುಬಿನ ಅಭಿವೃದ್ಧಿಗಾಗಿ ಆಧುನಿಕ ತಂತ್ರಗಾರಿಕೆ ಕುರಿತು ತರಬೇತಿ ನೀಡಲಾಗುತ್ತದೆ. ವಿದೇಶಿ ವಿದ್ಯಾಭ್ಯಾಸಕ್ಕೂ ಆಧ್ಯತೆ ನೀಡಲಾಗಿದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವವರಿಗೆ ಸುಮಾರು ₹50 ಲಕ್ಷದವರೆಗೂ ಬಡ್ಡಿರಹಿತ ಸಾಲ ದೊರೆಯಲಿದೆ ಎಂದು ಸುಜ್ಞಾನ ಮೂರ್ತಿ ತಿಳಿಸಿದರು.
ಜಿಪಂ ಮಾಜಿ ಸದಸ್ಯ ಎನ್. ಆರ್. ಜಯರಾಮ್ ಮಾತನಾಡಿ, ಜಿಲ್ಲೆಯ ವಿಶ್ವಕರ್ಮರಲ್ಲಿರುವ ಕೌಶಲ್ಯತೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಮತ್ತು ಮಾರುಕಟ್ಟೆ ಮಾಡಲು ಜಿಲ್ಲೆಯಲ್ಲಿ ಗುಡಿಕೈಗಾರಿಕಾ ಕೇಂದ್ರ ಸ್ಥಾಪನೆ ಮಾಡಿದರೆ ಗ್ರಾಹಕರು ಕೊಳ್ಳಲು ಅನುಕೂಲ, ವೃತ್ತಿನಿರತರಿಗೂ ಅನುಕೂಲವಾಗಲಿದೆ ಎಂದು ಸಲಹೆ ಇತ್ತರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ, ತಾಲೂಕು ವಿಶ್ವಕರ್ಮ ಸಮುದಾಯದ ಮುಖಂಡರಾದ ಮಹೇಂದ್ರ, ರಮೇಶ್, ಗಿರೀಶ್, ಹುಲಿಕಲ್ ಕೃಷ್ಣಾಚಾರ್, ಅರುಣ್ ಕುಮಾರ್, ಚಂದ್ರು, ವಾಲ್ಮೀಕಿ ಸಮಾಜದ ಮುಖಂಡ ವಸಂತ್ ಕುಮಾರ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಿದಾನಂದ್, ಕನ್ನಡ ಸೋಮಣ್ಣ, ರಾಜು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
21 ಟಿವಿಕೆ 4 – ತುರುವೇಕೆರೆಗೆ ಆಗಮಿಸಿದ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿಯವರನ್ನು ತಾಲೂಕು ವಿಶ್ವಕರ್ಮ ಸಮುದಾಯದ ಮುಖಂಡರು ಗೌರವಿಸಿದರು.