ಚಳ್ಳಕೆರೆ ನಗರದ ನಗರಸಭೆಯ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸುಮಾ ಭರಮಣ್ಣನವರನ್ನು ಸದಸ್ಯರು, ಅಧಿಕಾರಿಗಳು ಅಭಿನಂದಿಸಿದರು.
ನಗರಸಭೆ ಹರಾಜು ಪ್ರಕ್ರಿಯೆ ಮುಂದೂಡಿಕೆ: ಪೌರಾಯುಕ್ತ ಜಗರೆಡ್ಡಿ ಮಾಹಿತಿಕನ್ನಡಪ್ರಭ ವಾರ್ತೆ ಚಳ್ಳಕೆರೆ
ನಗರಸಭೆ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಜೈತುಂಬಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ಜಿಲ್ಲಾಧಿಕಾರಿಗಳು ಅಂಗೀಕರಿಸಿದ ಕಾರಣ ಉಪಾಧ್ಯಕ್ಷೆ ಸುಮಾ ಭರಮಣ್ಣ ಪ್ರಭಾರ ಅಧ್ಯಕ್ಷೆಯಾಗಿ ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಪೌರಾಯುಕ್ತ ಎಚ್.ಜಿ.ಜಗರೆಡ್ಡಿ ತಿಳಿಸಿದರು.ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಗರಸಭೆಯ ಅಭಿವೃದ್ಧಿ ಸಂಬಂಧಪಟ್ಟಂತೆ ಹಲವಾರು ಯೋಜನೆಗಳ ಅನುಷ್ಠಾನಗೊಳಿಸಲು ಸಿದ್ಧತೆ ನಡೆದಿವೆ. ಪ್ರತಿ ವರ್ಷದಂತೆ ಈ ವರ್ಷವೂ 2025-26ನೇ ಸಾಲಿನ ದಿನವಹಿ, ವಾರದ ಸಂತೆ, ಬಸ್ ಮತ್ತು ದ್ವಿಚಕ್ರವಾಹನ ನಿಲುಗಡೆ ಹರಾಜು ಪ್ರಕ್ರಿಯೆ ಬುಧವಾರ ನಡೆಯಬೇಕಿದ್ದು, ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದರು.
ಪ್ರಭಾರ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಸುಮಾ ಭರಮಣ್ಣನವರನ್ನು ಅಭಿನಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.