ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿ ಆತ್ಮ ವಿಶ್ವಾಸ ವೃದ್ದಿ: ಡಾ.ಧನಂಜಯ್

KannadaprabhaNewsNetwork |  
Published : May 25, 2025, 01:28 AM IST
ನರಸಿಂಹರಾಜಪುರ ಸೋಷಿಯಲ್ ವೆಲ್ ಫೇರ್ ಸೊಸೈಟಿಯ ನೇತ್ರತ್ಸವದಲ್ಲಿ ನಡೆದ ಒಂದು ದಿನದ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋಷಿಯಲ್ ವೆಲ್ ಫೇರ್ ಸೊಸೈಟಿಯ ನಿರ್ದೇಶಕ ರೆ.ಫಾ. ಜೋಬೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ್ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಮಕ್ಕಳ ಬೇಸಿಗೆ ಶಿಬಿರ ನಡೆಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಬೆಳೆಯಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ್ ತಿಳಿಸಿದರು.

ಸೋಷಿಯಲ್ ವೆಲ್ ಪೇರ್ ಸೊಸೈಟಿ ನೇತೃತ್ವದ ಮಕ್ಕಳ ಬೇಸಿಗೆ ಶಿಬಿರ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಮಕ್ಕಳ ಬೇಸಿಗೆ ಶಿಬಿರ ನಡೆಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಬೆಳೆಯಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ್ ತಿಳಿಸಿದರು.

ಶನಿವಾರ ಸೋಷಿಯಲ್ ವೆಲ್ ಫೇರ್ ಸೊಸೈಟಿ ಏರ್ಪಡಿಸಿದ್ದ ಒಂದು ದಿನದ ಮಕ್ಕಳ ಬೇಸಿಗೆ ಶಿಬಿರ ಹಾಗೂ ಮಕ್ಕಳ ಶೈಕ್ಷಣಿಕ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇಂದಿನ ಮಕ್ಕಳಿಗೆ ಸರ್ಕಾರದಿಂದ, ಸಂಘ ಸಂಸ್ಥೆಗಳಿಂದ ಹಾಗೂ ದಾನಿಗಳಿಂದ ಹಲವಾರು ಸೌಲಭ್ಯ ಸಿಗುತ್ತಿದೆ. ಮಕ್ಕಳು ಇದರ ಸೌಲಭ್ಯ ಪಡೆದುಕೊಳ್ಳಬೇಕು. ಡಾ.ಅಂಬೇಡ್ಕರ್ ಅವರು ಬಹಳ ಕಷ್ಟದಿಂದ ಹಲವಾರು ಪದವಿ ಪಡೆದಿದ್ದಾರೆ. ಸೋಷಿಯಲ್ ವೆಲ್ ಫೇರ್ ಸೊಸೈಟಿ ಹಲವಾರು ವರ್ಷಗಳಿಂದ ಮಕ್ಕಳ ಬೇಸಿಗೆ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸೋಷಿಯಲ್ ವೆಲ್ ಫೇರ್ ಸೊಸೈಟಿ ಕಾರ್ಯಕ್ರಮ ಸಂಯೋಜಕ ಪ್ರಭಾಕರ್ ಮಾತನಾಡಿ, ಬೇರೆ,ಬೇರೆ ಶಾಲೆಯಿಂದ ಬಂದ ಮಕ್ಕಳು ಒಂದೇ ಕಡೆ ಸೇರಲು ಬೇಸಿಗೆ ಶಿಬಿರ ಸಹಕಾರಿಯಾಗಲಿದೆ. ಮಕ್ಕಳಲ್ಲಿ ಅಡಗಿರುವ ಕೌಶಲ್ಯ ಈ ಶಿಬಿರದಲ್ಲಿ ಅನಾವರಣಗೊಳ್ಳುತ್ತದೆ. ನಮ್ಮ ಸಂಸ್ಥೆ ಹಲವಾರು ವರ್ಷಗಳಿಂದಲೂ ಬೇಸಿಗೆ ಶಿಬಿರ ನಡೆಸಿಕೊಂಡು ಬರುತ್ತಿದೆ. ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಅವಶ್ಯಕತೆ ಇರುವ ಶೈಕ್ಷಣಿಕ ಕಿಟ್ ಸಹ ನೀಡುತ್ತೇವೆ ಎಂದರು.ಸೋಷಿಯಲ್ ವೆಲ್ ಫೇರ್ ಸೊಸೈಟಿ ನಿರ್ದೇಶಕ ರೆ.ಫಾ.ಜೋಬೀಶ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರಕೃತಿ ಶ್ರೀಕಾಂತ್ ಮಕ್ಕಳಿಗೆ ತರಬೇತಿ ನೀಡಿದರು.100 ವಿದ್ಯಾರ್ಥಿಗಳು ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದರು. ಶ್ರೀಮತಿ ಪ್ರಿನ್ಸಿ ಸ್ವಾಗತಿಸಿದರು. ಸಾಂತ್ವನ ಕೇಂದ್ರದ ಸಮಾ ಲೋಚಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ
ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ