
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಮೂಡಿಗೆರೆಯ ಮುಗುಳುವಳ್ಳಿ ಗ್ರಾ ಪಂ ಏರ್ಪಡಿಸಲಾಗಿದ್ದ ಬೇಸಿಗೆ ಬೆಸುಗೆ ಶಿಬಿರ ಉದ್ಘಾಟಿಸಿ ಮಾತನಾಡಿ, ಬೇಸಿಗೆ ಶಿಬಿರದಿಂದ ಕಲೆಗಳ ಅಭಿವೃದ್ಧಿಯಾಗುತ್ತದೆ. ಸಂಪರ್ಕವೂ ಹೆಚ್ಚಾಗುತ್ತದೆ. ಬೇರೆ ಬೇರೆ ಶಾಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳು ಸ್ನೇಹಿತರಾಗುತ್ತಾರೆ. ಇಂತಹ ಹೃದಯ ಸ್ಪರ್ಶಿ ಕಾರ್ಯಕ್ರಮಗಳಿಗೆ ಪೋಷಕರು ಬೆಂಬಲ ನೀಡಬೇಕೆಂದು ವಿನಂತಿಸಿದರು.
ಚೆಸ್, ಕರಾಟೆ, ಯೋಗ, ಕೇರಂ, ಚಿತ್ರಕಲೆ ಸೇರಿದಂತೆ ಹಲವು ರೀತಿಯ ಗ್ರಾಮೀಣ ಆಟಗಳ ಬಗ್ಗೆ ತಿಳಿಯಲು ಶಿಬಿರ ಪೂರಕ.ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರ್ತಿಸಿ ಹೊರತರಲು ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳು ಬಹುಮಾನ ಪಡೆದಾಗ ಉಳಿದವರಿಗೆ ಸ್ಪೂರ್ತಿಯಾಗುತ್ತದೆ ಎಂದು ಹೇಳಿದರು.ಬೇಸಿಗೆ ಶಿಬಿರದಲ್ಲಿ ತಮ್ಮ ಮಕ್ಕಳು ಪಾಲ್ಗೊಂಡಾಗ ಪೋಷಕರಿಗೆ ಆತಂಕ ಇರುವುದಿಲ್ಲ. ಚಿಕ್ಕಮಗಳೂರು ಜಿಲ್ಲೆ ಹೊರತು ಪಡಿಸಿ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಬೇಸಿಗೆ ಬೆಸುಗೆ ಶಿಬಿರ ನಡೆಯುತ್ತಿಲ್ಲ. ಜಿಲ್ಲೆಯ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಇಂತಹ ಶಿಬಿರಗಳನ್ನು ಜಿ.ಪಂನಿಂದ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಸರ್ಕಾರ ಗ್ರಾಮೀಣ ಭಾಗದ ಎಲ್ಲಾ ಮಕ್ಕಳು, ಯುವಕ-ಯುವತಿಯರಿಗೆ ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಗಳಲ್ಲಿ ಪುಸ್ತಕಗಳನ್ನು ಅಳವಡಿಸಲಾಗಿದ್ದು, ಅವುಗಳ ಸದ್ಭಳಕೆ ಮಾಡಲು ಪೋಷಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹಿಸ ಬೇಕು. ಜೊತೆಗೆ ಬೇಸಿಗೆ ಶಿಬಿರಗಳಲ್ಲಿ ವಿಷಯ ತಜ್ಞರಿಂದ ಉಪಯುಕ್ತ ಮಾಹಿತಿ ಕೊಡಿಸಲಾಗುತ್ತಿದ್ದು, ಗ್ರಾಮೀಣ ಸೊಗಡಿನ ಹತ್ತು ಹಲವು ಕ್ರೀಡೆಗಳು ಪರಿಚಯವಾಗಬೇಕೆಂಬುದು ಉದ್ದೇಶವಾಗಿದೆ ಎಂದು ಹೇಳಿದರು.
ಬೇಸಿಗೆ ರಜೆ ಸಂದರ್ಭದಲ್ಲಿ ತಮ್ಮ ಮಕ್ಕಳು ಕೆರೆ, ಹಳ್ಳ, ಕಟ್ಟೆಗಳ ಕಡೆ ಈಜಲು ಹೋಗಿ ಪ್ರಾಣ ಹಾನಿಯಾಗಿರುವ ಬಗ್ಗೆ ಪೋಷಕರು ಆತಂಕಗೊಳ್ಳುತ್ತಾರೆ. ಇದನ್ನು ತಡೆಯುವ ಸಲುವಾಗಿ ಬೇಸಿಗೆ ಶಿಬಿರ ಆಯೋಜಿಸಿದ್ದು, ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಕಲೆಗಳನ್ನು ಪರಿಚಯಿಸಲಾಗುತ್ತಿದ್ದು, ಈ ಶಿಬಿರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ವೇಳೆ ಇಓ ವಿಜಯಕುಮಾರ್, ಗ್ಯಾರಂಟಿ ಪ್ರಾಧಿಕಾರ ಸಮಿತಿಯ ಸದಸ್ಯರಾದ ಬಸವರಾಜು, ಶೃತಿ, ಗ್ರಾಮಸ್ಥರಾದ ಪರಮೇಶ್, ಚಂದ್ರು, ರಘು ಇದ್ದರು.