ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಜೆನ್ ಸ್ಪೋಟ್ಸ್, ಮಾರ್ಷಲ್ ಅಕಾಡೆಮಿಯಲ್ಲಿ ನಡೆಯುತ್ತಿರುವ 9ನೇ ವರ್ಷದ ಶಿವು ಕರಾಟೆ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಮಕ್ಕಳಲ್ಲಿ ಹಲವು ಪ್ರತಿಭೆ ಅಡಕವಾಗಿದೆ. ಅವರಿಗೆ ಸೂಕ್ತ ತರಬೇತಿ ಇಲ್ಲದೇ ಎಲೆಮರೆಕಾಯಿಯಂತಾಗಿದ್ದಾರೆ. ಪಟ್ಟಣದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದಿಂದ ವ್ಯಕ್ತಿತ್ವ ವಿಕಾಸನಗೊಳ್ಳುವ ಜೊತೆಗೆ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದೆ ಎಂದರು.
ನಾಯಕತ್ವ ಗುಣ, ಹಾಸ್ಯ, ಗಾಯನ ಸೇರಿದಂತೆ ಹಲವು ವಿಷಯಗಳ ಬಗ್ಗೆತರಬೇತಿ ನೀಡುತ್ತಿರುವುದರಿಂದ ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.ಶಿಬಿರ ವ್ಯವಸ್ಥಾಪಕ ಶಿವು ಮಾತನಾಡಿ, ಮಕ್ಕಳಿಗೆ ವಿವಿಧ ಕಲೆಗಳನ್ನು ಪರಿಚಯಿಸುವ ಹಿನ್ನೆಲೆಯಲ್ಲಿ 4ರಿಂದ 20 ವರ್ಷದೊಳಗಿನವರಿಗೆ ಕರಾಟೆ, ಮಾತನಾಡುವ ಗೊಂಬೆ, ಈಜು, ಮಾಸ್ಕ್ ತಯಾರಿಕೆ, ನೃತ್ಯ, ಗಾಯನ, ಚಿತ್ರಕಲೆ, ಕಲೆ ಮತ್ತು ಕರಕುಶಲ, ನಾಟಕ, ಭರತನಾಟ್ಯ, ಅತ್ಮರಕ್ಷಣೆ, ಬಿಲ್ಲುಗಾರಿಕೆ, ತಮಾಷೆಯ ಆಟಗಳು ಹಾಗೂ ಹೊಸದಾಗಿ ಗೀಟರ್, ಕೀ ಬೋರ್ಡ್ ಕಲಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಮೊ-9901272626, ಮೊ-9481406060 ಸಂಪರ್ಕಿಸಬಹುದಾಗಿದೆ ಎಂದರು.
ಮಕ್ಕಳನ್ನು ಬೇಸಿಗೆ ಶಿಬಿರಗಳಿಗೆ ದಾಖಲಿಸಿ
ಬೇಸಿಗೆ ಶಿಬಿರಗಳಿಂದ ಮಕ್ಕಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಬೇಸಿಗೆ ಶಿಬಿರಗಳಿಗೆ ದಾಖಲಿಸಿ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಮಗಿರಿ ಶ್ರೀ ಕ್ಷೇತ್ರದ ಆದಿಚುಂಚನಗಿರಿ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಹೇಳಿದರು.
ಮಕ್ಕಳು ತಮ್ಮಲ್ಲಿ ಸುಪ್ತ ಪ್ರತಿಭೆ ಹೊರಚೆಲ್ಲಲು ಶಿಬಿರವು ಸಹಕಾರಿಯಾಗಿರುವ ಕಾರಣ ಮಕ್ಕಳು ತಮ್ಮ ಪ್ರತಿಭೆಯನ್ನು ಹೊರ ತರಲು ಪ್ರಯತ್ನಿಸಬೇಕು. ಶಿಬಿರದಲ್ಲಿ ಮಕ್ಕಳಿಗೆ ಸಂಪನ್ಮೂಲ ವ್ಯಕ್ತಿಗಳು ನೀಡುವ ವಿಚಾರ ಹಾಗೂ ಮಾರ್ಗದರ್ಶನವು ಮಕ್ಕಳ ವ್ಯಕ್ತಿತ್ವವು ಸಮಗ್ರವಾಗಿ ವಿಕಸನಗೊಳ್ಳುವಂತೆ ಮಾಡುತ್ತದೆ ಎಂದು ತಿಳಿಸಿದರು.