ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಮೀಪದ ಸಾಂದೀಪನಿ ಶಾಲೆಯಲ್ಲಿ ಯಶೋದೆ ರಂಗಶಿಕ್ಷಣ ಟ್ರಸ್ಟ್ ವತಿಯಿಂದ ಕಳೆದ ಇಪ್ಪತ್ತು ದಿನಗಳಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯು ಅವಶ್ಯಕವೆಂದರು, ಇದರಿಂದಾಗಿ ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕಲಿಸುವ ಶಿಬಿರಗಳು ಇತೀಚೆಗೆ ಕಡಿಮೆಯಾಗುತ್ತದೆ. ಅದು ಹೆಚ್ಚಾಗಬೇಕು ಎಂದರು.ವಕೀಲರಾದ ಶ್ರೀನಿಧಿ ಮಾತನಾಡಿ, ವರ್ಷವಿಡೀ ತರಗತಿಯಲ್ಲಿ ಪಾಠಪ್ರವಚನ ಕೇಳಿದ ಮಕ್ಕಳಿಗೆ ಇಂತಹ ಶಿಬಿರಗಳು ಮಕ್ಕಳ ಚಟುವಟಿಕೆಗಳಲ್ಲಿ ಬದಲಾವಣೆ ತರಲಿವೆ. ಸಾಂಸ್ಕೃತಿಕ ಚಟುವಟಿಕೆಗಳೊಡನೆ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಹಾಗೂ ಕಲಿಸುವ ಕಾರ್ಯವಾಗಬೇಕು ಎಂದರು.
ಶಿಬಿರದಲ್ಲಿ ಯಶೋಧೆ ರಂಗ ಟ್ರಸ್ಟ್ನ ನಿಶಾಂತ್ ಮುತ್ತಣ್ಣ, ಗಣೇಶ್ ಭೀಮನಕೋಣೆ, ಸಿದ್ದಾನ್ ವಿಜಯ್, ಮಾಲಾಶ್ರೀ ಗಾವಂಕರ್, ಕಾಜು ಗುತ್ತಲ್ ಅವರುಗಳು ಕಲಿಸಿ ಕೊಟ್ಟ ಹಾಡು ಮತ್ತು ನಾಟಕಗಳನ್ನು ಪ್ರದರ್ಶಿಸಿ ಗಮನ ಸೆಳೆದರು.