ಬೇಸಿಗೆ ಶಿಬಿರಗಳು ಮಕ್ಕಳ ಬೌದ್ಧಿಕ ಜ್ಞಾನವೃದ್ಧಿಗೆ ಸಹಕಾರಿ: ಆನಂದ್

KannadaprabhaNewsNetwork |  
Published : May 21, 2025, 12:01 AM IST
ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮಪಂಚಾಯತ್ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಗ್ರಾ.ಪಂ.ಅಧ್ಯಕ್ಷ ನವಿತಾ, ಉಪಾಧ್ಯಕ್ಷ ನಾಗೇಶ್ ಪಿಡಿಓ ಆನಂದಕುಮಾರ್ ಪ್ರಮಾಣ ಪತ್ರ ವಿತರಣೆ ಮಾಡಿದರು, ಅರಿವು ಕೇಂದ್ರದ ಗಂಗಾಧರ್ ಇತರರು ಇದ್ದರು. | Kannada Prabha

ಸಾರಾಂಶ

ಗಿಡ್ಡಪ್ಪನಹಳ್ಳಿ ಗ್ರಾಪಂ, ಶಿಕ್ಷಣ ಫೌಂಡೇಷನ್ ಹಾಗೂ ಅರಿವು ಕೇಂದ್ರ ಗಿಡ್ಡಪ್ಪನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ೩೦ ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿದ್ದು, ಶಿಕ್ಷಣ ಫೌಂಡೇಷನ್ ವತಿಯಿಂದ ನಾನಾ ರೀತಿಯ ಚಟುವಟಿಕೆಗಳನ್ನು ನಡೆಸಲಾಗಿದ್ದು ಮಕ್ಕಳಿಗೆ ಅನುಕೂಲವಾಗಿದೆ.

ಸೂಲಿಬೆಲೆ: ಬೇಸಿಗೆ ರಜೆ ಕಾಲದಲ್ಲಿ ಹಮ್ಮಿಕೊಳ್ಳುವ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಶಿಬಿರವು ಮಕ್ಕಳ ಬೌದ್ಧಿಕ ಜ್ಞಾನವೃದ್ಧಿಗೆ ಸಹಕಾರಿಯಾಗಿದೆ ಎಂದು ಗಿಡ್ಡಪ್ಪನಹಳ್ಳಿ ಪಿಡಿಒ ಆನಂದ್ ಕುಮಾರ್ ಹೇಳಿದರು.

ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಪಂ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ೩೦ ದಿನಗಳ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಗಿಡ್ಡಪ್ಪನಹಳ್ಳಿ ಗ್ರಾಪಂ, ಶಿಕ್ಷಣ ಫೌಂಡೇಷನ್ ಹಾಗೂ ಅರಿವು ಕೇಂದ್ರ ಗಿಡ್ಡಪ್ಪನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ೩೦ ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿದ್ದು, ಶಿಕ್ಷಣ ಫೌಂಡೇಷನ್ ವತಿಯಿಂದ ನಾನಾ ರೀತಿಯ ಚಟುವಟಿಕೆಗಳನ್ನು ನಡೆಸಲಾಗಿದ್ದು ಮಕ್ಕಳಿಗೆ ಅನುಕೂಲವಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ನವಿತಾ ಮಾತನಾಡಿ, ಬೇಸಿಗೆ ಶಿಬಿರಗಳು ಕೇವಲ ನಗರಕ್ಕೆ ಸೀಮಿತವಾಗಿದ್ದು, ಗ್ರಾಮೀಣ ಮಕ್ಕಳು ವಂಚಿತರಾಗುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ೩೦ ದಿನಗಳ ಬೇಸಿಗೆ ಶಿಬಿರವು ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.

ಗ್ರಾಪಂ ಅರಿವು ಕೇಂದ್ರದ ಮುಖ್ಯಸ್ಥ ಗಂಗಾಧರ್ ಮಾತನಾಡಿ, ಶಿಕ್ಷಣ ಫೌಂಡೇಷನ್ ವತಿಯಿಂದ ನಿರಂತರವಾಗಿ ಶಿಕ್ಷಣಕ್ಕೆ ಪೂರಕವಾದ ಅಭ್ಯಾಸಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಅಗತ್ಯವಿದ್ದ ಹಲವು ಚಟುವಟಿಕೆಗಳನ್ನು ಕಲಿಸಿಕೊಟ್ಟಿದ್ದಾರೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷರಾದ ಅಕ್ಬರ್‌ ಅಲಿಖಾನ್ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.

ಗ್ರಾಪಂ ಉಪಾಧ್ಯಕ್ಷ ನಾಗೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ್, ಶಿಕ್ಷಣ ಫೌಂಡೇಷನ್ ಸಂಚಾಲಕ ಗಂಗಾಧರ್, ಧನುಷ್, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!