ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯುತ್ತಿರುವ 24ನೇ ವರ್ಷದ ಉಚಿತ ಬೇಸಿಗೆ ತರಬೇತಿ ಶಿಬಿರದಲ್ಲಿ ಗುರುವಾರ ಪಾಲ್ಗೊಂಡು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಪ್ರತಿಭೆ ಎಲ್ಲರಲ್ಲೂ ಇದೆ. ಪ್ರತಿಭೆ ಅನಾವರಣಗೊಳಿಸಿಕೊಳ್ಳುವುದು ಮುಖ್ಯ. ಉಜ್ವಲ ಭವಿಷ್ಯವನ್ನು ವಿದ್ಯಾರ್ಥಿಗಳ ರೂಪಿಸಿಕೊಳ್ಳಬೇಕು ಎಂದ ಅವರು ಶುಭ ಹಾರೈಸಿದರು.ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೊಂಡಿರ ನಾಣಯ್ಯ ಮಾತನಾಡಿ, ಜಿಲ್ಲೆಯ ಮಂದಿಗೆ ದೇಶದೆಲ್ಲೆಡೆ ಗೌರವದ ಜೊತೆಗೆ ಹಾಕಿ ಕ್ರೀಡೆಗೆ ವಿಶೇಷ ಪ್ರಶಸ್ತಿ ಇದೆ. ಕ್ರೀಡೆಯಲ್ಲಿ ಉತ್ತಮ ತರಬೇತಿ ಹೊಂದುವುದರ ಮೂಲಕ ಮಕ್ಕಳು ಸತ್ಪ್ರಜೆಗಳಾಗಬೇಕು ಎಂದರು.
ಅಕಾಡೆಮಿ ಉಪಾಧ್ಯಕ್ಷ ಕಾಂಡಂಡ ಜೋಯಪ್ಪ ಮಾತನಾಡಿ, ಅಕಾಡೆಮಿಯ ಸ್ಥಾಪಕ ಅಧ್ಯಕ್ಷ ಕಲಿಯಂಡ ಸಾಬು ಅಯ್ಯನ ಅವರ ಶ್ರಮದ ಫಲವಾಗಿ ಮಕ್ಕಳಿಗೆ ಇತ್ತೀಚಿನ ದಿನಗಳಲ್ಲಿ ಉತ್ತಮ ತರಬೇತಿ ಸಿಗುತ್ತಿದೆ. ಮೊಬೈಲ್ ಬಳಸುವುದನ್ನು ದೂರ ಮಾಡಿ ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಅಕಾಡೆಮಿ ಕಾರ್ಯದರ್ಶಿ ಹಾಗೂ ತರಬೇತುದಾರರಾಗಿ ಕೇಟೋಳಿರ ಡಾಲಿ ಅಚ್ಚಪ್ಪ, ಅರೆಯಡ ಗಣೇಶ್ ,ಮಾಚೆಟ್ಟಿರ ಕುಶು ಕುಶಾಲಪ್ಪ, ನಿರ್ದೇಶಕರು, ಪೋಷಕರು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.