ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೃಂಗ 2025ರ ಸಂಭ್ರಮ ಸಂಪನ್ನ

KannadaprabhaNewsNetwork |  
Published : Apr 01, 2025, 12:45 AM IST
ಕ್ಯಾಪ್ಷನ31ಕೆಡಿವಿಜಿ31 ದಾವಣಗೆರೆಯ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶೃಂಗ 2025 ದ ಸಮಾರೋಪ ನಡೆಯಿತು. | Kannada Prabha

ಸಾರಾಂಶ

ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಎರಡನೇ ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶೃಂಗ-2025ದ ಸಮಾರೋಪ ಸಮಾರಂಭ ಶನಿವಾರ ಸಂಜೆ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.

ದಾವಣಗೆರೆ: ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಎರಡನೇ ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶೃಂಗ-2025ದ ಸಮಾರೋಪ ಸಮಾರಂಭ ಶನಿವಾರ ಸಂಜೆ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.

ಬೆಳಗಾವಿಯ ವಿಟಿಯು ರಿಜಿಸ್ಟ್ರಾರ್ ಡಾ. ಬಿ.ಇ. ರಂಗಸ್ವಾಮಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಇತ್ತೀಚಿನ ಬದಲಾವಣೆಯ ದಿನಗಳಲ್ಲಿ ವಿದ್ಯಾರ್ಥಿಗಳು ನಿರಂತರ ಸಾಧನೆ ಮತ್ತು ಬದಲಾವಣೆಗೆ ತಕ್ಕಂತೆ ಹೊಂದಿಕೊಳ್ಳುವುದು ಅನಿವಾರ್ಯ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಹೊಂದಬೇಕು. ಇದರಿಂದ ಅವರಿಗೆ ಉತ್ತಮ ಭವಿಷ್ಯ ಇರುತ್ತದೆ ಎಂದು ಹೇಳಿದರು.

ಜೈನ್ ಸಮೂಹ ಸಂಸ್ಥೆಗಳ ಸಲಹೆಗಾರ ಡಾ.ಮಂಜಪ್ಪ ಸಾರಥಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಕಲಿಕೆಯಿಂದ ತಮ್ಮ ವಿದ್ಯಾರ್ಥಿ ಜೀವನದಿಂದಲೆ ನಾಗಲೋಟದಿಂದ ಬೆಳೆಯುತ್ತಿರುವ ಜಗತ್ತಿಗೆ ಸವಾಲೊಡ್ಡುವ ರೀತಿಯಲ್ಲಿ ತಯಾರಾಗಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ. ಡಿ.ಬಿ. ಗಣೇಶ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಸಂಚಾಲಕ ಡಾ.ಸಂತೋಷ ಎಂ. ನೇಜಕರ್, ಸಾಂಸ್ಕೃತಿಕ ಸಂಯೋಜಕ ಪ್ರೊ. ಎಸ್.ಮುರಳೀಧರ, ಕ್ರೀಡಾ ಸಂಯೋಜಕ ಟಿ.ಅರುಣ ಕುಮಾರ, ಡಾ. ಎನ್.ಮಧುಕೇಶ್ವರ, ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿನ್ನೆಲೆ ಗಾಯಕರಾದ ಡಾ.ಶಮಿತಾ ಮಲ್ನಾಡ್, ಡಾ.ಶ್ರೀರಾಮ್ ಕಸರ್ ಚಲನಚಿತ್ರ ಹಾಡುಗಳನ್ನು ಹಾಡಿ ರಂಜಿಸಿದರು.

- - - -31ಕೆಡಿವಿಜಿ31.ಜೆಪಿಜಿ:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ