ಜುಲೈ 21, 22ರಂದು ದಾವಣಗೆರೆಯಲ್ಲಿ ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ ಸಮ್ಮೇಳನ

KannadaprabhaNewsNetwork |  
Published : Jun 27, 2025, 12:48 AM IST
ಕ್ಯಾಪ್ಷನ25ಕೆಡಿವಿಜಿ31 ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು | Kannada Prabha

ಸಾರಾಂಶ

ಜುಲೈ 21 ಮತ್ತು 22ರಂದು ದಾವಣಗೆರೆಯ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ಜರುಗಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ನುಡಿದಿದ್ದಾರೆ.

- ಬೆಂಗಳೂರಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ರಂಭಾಪುರಿ ಶ್ರೀ- - -

ದಾವಣಗೆರೆ: ಜುಲೈ 21 ಮತ್ತು 22ರಂದು ದಾವಣಗೆರೆಯ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ಜರುಗಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ನುಡಿದರು.

ಬೆಂಗಳೂರಿನ ಚಿಕ್ಕಪೇಟೆಯ ಮಹಂತಿನ ಮಠದಲ್ಲಿ ಆಷಾಢ ಮಾಸ ಧರ್ಮ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಅವರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪಂಚಪೀಠಗಳ ಜಗದ್ಗುರುಗಳು ಮತ್ತು ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ, ಮಧ್ಯಪ್ರದೇಶ, ಉತ್ತರಾಂಚಲ ರಾಜ್ಯಗಳಿಂದ ವೀರಶೈವ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದರು.

ದಾವಣಗೆರೆಯ ಶ್ರೀಮದ್‌ ವೀರಶೈವ ಸದ್ಬೋಧನಾ ಸಂಸ್ಥೆ, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಆಶ್ರಯದಲ್ಲಿ ಜು.21ರಂದು ಜರುಗುವ ಸಮ್ಮೇಳನವನ್ನು ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯಾಧ್ಯಕ್ಷ ಶಂಕರ ಬಿದರಿ ಸದಾಶಯ ನುಡಿಗಳನ್ನು ನುಡಿಯಲಿದ್ದಾರೆ ಎಂದರು.

ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವ ಅಧ್ಯಕ್ಷರಾದ ರೇಣುಕ ಶಿವಾಚಾರ್ಯ ಸ್ವಾಮಿಗಳು ಎಡೆಯೂರು ಮತ್ತು ಅಧ್ಯಕ್ಷರಾದ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ಸಮಾರಂಭದಲ್ಲಿ ಮಂತ್ರಿಗಳು, ಶಾಸಕರು, ಸಮಾಜದ ಧುರೀಣರು ಪಕ್ಷಾತೀತವಾಗಿ ಪಾಲ್ಗೊಳ್ಳಲಿದ್ದಾರೆ. ನಾಡಿನ ಧರ್ಮಾಭಿಮಾನಿಗಳು ಪಾಲ್ಗೊಳ್ಳಬೇಕು ಎಂದರು.

ಜು.1ರಂದು ಸಿದ್ಧತಾ ಸಭೆ:

ಜು.1ರಂದು ಶ್ರೀ ರಂಭಾಪುರಿ, ಶ್ರೀ ಉಜ್ಜಯಿನಿ ಮತ್ತು ಶ್ರೀ ಶ್ರೀಶೈಲ ಜಗದ್ಗುರು ಸಾನ್ನಿಧ್ಯದಲ್ಲಿ ಕಾರ್ಯಕ್ರಮ ದಾವಣಗೆರೆಯ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ಸಿದ್ಧತಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಧರ್ಮಾಭಿಮಾನಿಗಳು ಪಾಲ್ಗೊಳ್ಳಲು ಗಣಿ-ಭೂ ವಿಜ್ಞಾನ ಖಾತೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದರು.

- - -

-25ಕೆಡಿವಿಜಿ31: ರಂಭಾಪುರಿ ಶ್ರೀ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ