ಚಿಕ್ಕೋಡಿ ಡಿಡಿಪಿಐ, ಬಿಇಒಗೆ ಸಮನ್ಸ್‌ ಸಮಸ್ಸ್‌ ಜಾರಿ

KannadaprabhaNewsNetwork |  
Published : Jun 08, 2025, 02:01 AM IST

ಸಾರಾಂಶ

ತಮ್ಮ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಕಟ್ಟಿಸಿಕೊಡಬೇಕೆಂದು ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ್ದ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತುಗೊಳಿಸಿದ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಕೊಂಡಿದೆ. ಈ ಪ್ರಕರಣದ ವಿಚಾರಣೆಗೆ ಜೂ.11 ರಂದು ಹಾಜರಾಗುವಂತೆ ಚಿಕ್ಕೋಡಿ ಡಿಡಿಪಿಐ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತಮ್ಮ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಕಟ್ಟಿಸಿಕೊಡಬೇಕೆಂದು ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ್ದ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತುಗೊಳಿಸಿದ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಕೊಂಡಿದೆ. ಈ ಪ್ರಕರಣದ ವಿಚಾರಣೆಗೆ ಜೂ.11 ರಂದು ಹಾಜರಾಗುವಂತೆ ಚಿಕ್ಕೋಡಿ ಡಿಡಿಪಿಐ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ.

ಮುಖ್ಯಶಿಕ್ಷಕ ಮಡಿವಾಳರ ಅವರು ತಮ್ಮ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಕಟ್ಟಿಸಿಕೊಡಬೇಕು ಎಂದು ಆಗ್ರಹಿಸಿ ಮೌನ ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಯ ಶಿಸ್ತನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಮಡಿವಳರ ಅವರನ್ನು ಸೇವೆಯಿಂದ ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಕಾರಿ ಆದೇಶ ಹೊರಡಿಸಿದ್ದರು. ಪ್ರತಿಭಟನೆ ಮಾಡಿದವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಮಕ್ಕಳ ಶಿಕ್ಷಣದ ಹಕ್ಕನ್ನು ಹತ್ತಿಕ್ಕಲಾಗಿದೆ ಗ್ರಾಮೀಣ ಭಾಗದಲ್ಲಿ ಅದರಲ್ಲಿಯೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಕುಟುಂಬದಿಂದ ಬಂದ ಮಕ್ಕಳು ಹೆಚ್ಚಾಗಿ ಸರ್ಕಾರಿ ಶಾಲೆಗಳನ್ನೇ ಅವಲಂಬಿಸಿದ್ದಾರೆ. ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ 9 ವರ್ಷಗಳಿಂದ ಶಾಲೆ ಅಭಿವೃದ್ಧಿಗೆ ಹೋರಾಟ ಮಾಡುತ್ತ ಬಂದಿದ್ದಾರೆ. ಶಿಕ್ಷಕರ ಈ ಕ್ರಮವನ್ನು ಆಯೋಗವು ಎತ್ತಿಹಿಡಿಯುತ್ತದೆ. ಅಲ್ಲದೇ, ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಶಾಲೆಗಾಗಿ ಕೊಠಡಿ ಬೇಡಿಕೆ ಇಟ್ಟಿದ್ದು ನಿಯಮ ಬಾಹೀರವಾಗಲ್ಲ ಎಂದು ಆಯೋಗವು ಭಾವಿಸುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಕೈಗೊಂಡ ಕ್ರಮಗಳ ಮಾಹಿತಿಯನ್ನು, ಅಗತ್ಯ ದಾಖಲೆಗಳನ್ನು ನೇರವಾಗಿ ಮತ್ತು ಖುದ್ದಾಗಿ ಕಡ್ಡಾಯವಾಗಿಸಲ್ಲಿಸಬೇಕು ಎಂದು ಆಯೋಗವು ಹೇಳಿದೆ. ಸೆಕ್ಷನ್ 14(1) (ಎ) ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾಯ್ದೆ 2005ರ ಅನ್ವಯ ಈ ಸಮನ್ಸ್ ಜಾರಿಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾ.ನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು
ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು