ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರದ ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರನ್ನು 1,88,706 ಮತಗಳಿಂದ ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. 16 ಚುನಾವಣೆಯಲ್ಲಿ 10 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಕಳೆದ ಬಾರಿ ಬಿಜೆಪಿಯಿಂದ ವಿ.ಶ್ರೀನಿವಾಸಪ್ರಸಾದ್ ಅಲ್ಪಮತಗಳಿಂದ ಗೆಲುವು ಸಾಧಿಸಿದ್ದರಿಂದ ಕ್ಷೇತ್ರ ಕೈ ತಪ್ಪಿ ಹೋಗಿತ್ತು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ವರುಣಾ, ಟಿ.ನರಸೀಪುರ, ನಂಜನಗೂಡು ಮತ್ತು ಎಚ್.ಡಿ. ಕೋಟೆ ಕ್ಷೇತ್ರ ಕಾಂಗ್ರೆಸ್ ಹಾಗೂ ಹನೂರಿನಿಂದ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಂದೆ ಸಚಿವ ಎಚ್.ಸಿ. ಮಹದೇವಪ್ಪ ಅವರ ಕ್ಷೇತ್ರ ನರಸೀಪುರ, ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿದ್ದರಿಂದ ಕ್ಷೇತ್ರವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಈ ಇಬ್ಬರು ನಾಯಕರಿಗೂ ಸೃಷ್ಠಿಯಾಗಿದ್ದರಿಂದ ಎಲ್ಲಾ ಶಾಸಕರನ್ನು ಹೆಚ್ಚಿನ ವಿಶ್ವಾಸಕ್ಕೆ ತೆಗೆದುಕೊಂಡ ಪರಿಣಾಮ ಗೆಲುವು ಸುಲಭವಾಗಿ ದಕ್ಕಿತು.
ಬಿಜೆಪಿ ನಾಯಕರು ಚಾಮರಾಜನಗರ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಹಾಗೂ ಸ್ಧಳೀಯ ಮಟ್ಟದಲ್ಲಿ ನಾಯಕತ್ವದ ಕೊರತೆಯಿಂದಾಗಿ, ಸಮರ್ಥವಾಗಿ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಸೋಲು ಅನುಭವಿಸಿದ್ದಾರೆ.ಪ್ರತಿ ಸುತ್ತಿನಲ್ಲೂ ಸುನಿಲ್ ಬೋಸ್ ಮುನ್ನಡೆ: