ಬಿಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಸುನಿತಾ ನೇಮಕ

KannadaprabhaNewsNetwork |  
Published : Feb 06, 2026, 04:15 AM IST
ಐಹೊಳೆ | Kannada Prabha

ಸಾರಾಂಶ

ಕೆಪಿಸಿಸಿಯ ರಾಜ್ಯ ಸಂಚಾಲಕಿ ಅಥಣಿಯ ಸುನಿತಾ ಐಹೊಳೆ ಇವರನ್ನು ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಸಹಕಾರ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿ ಹಾಗೂ ಸರ್ಕಾರದ ಪದ ನಿಮಿತ್ತ ಜಂಟಿ ಕಾರ್ಯದರ್ಶಿ ಎ.ಸಿ.ದಿವಾಕರ ನೇಮಕ ಮಾಡಿ ಆದೇಶಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾಗವಾಡ

ಕೆಪಿಸಿಸಿಯ ರಾಜ್ಯ ಸಂಚಾಲಕಿ ಅಥಣಿಯ ಸುನಿತಾ ಐಹೊಳೆ ಇವರನ್ನು ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಸಹಕಾರ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿ ಹಾಗೂ ಸರ್ಕಾರದ ಪದ ನಿಮಿತ್ತ ಜಂಟಿ ಕಾರ್ಯದರ್ಶಿ ಎ.ಸಿ.ದಿವಾಕರ ನೇಮಕ ಮಾಡಿ ಆದೇಶಿಸಿದ್ದಾರೆ.

ಡಿಸಿಸಿ ಬ್ಯಾಂಕ್‌ ಆಯ್ಕೆಯಾದ ಸುನಿತಾ ಐಹೊಳೆಯವರನ್ನು ಪುರಸಭೆಯ ಸದಸ್ಯ ರಾವಸಾಹೇಬ ಐಹೊಳೆ, ಕಾಂಗ್ರೆಸ್ ಅಥಣಿ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ, ಕಾಂಗ್ರೆಸ್ ಮುಖಂಡ ಸಂಜೀವ ಕಾಂಬಳೆ ಸೇರಿದಂತೆ ಅನೇಕರು ಸನ್ಮಾನಿಸಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನನ್ನು ಗುರುತಿಸಿ ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ನೇಮಕ ಮಾಡಿದ್ದು ಸಂತೋಷ ತಂದಿದೆ. ನನ್ನ ನೇಮಕಕ್ಕೆ ಕಾರಣರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೇರಿ ಮುಖಂಡರನ್ನು ಅಭಿನಂದಿಸುವೆ.

-ಸುನಿತಾ ಐಹೊಳೆ, ಕೆಪಿಸಿಸಿಯ ರಾಜ್ಯ ಸಂಚಾಲಕಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ