ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶುಕ್ರವಾರ ಸುಂಟಿಕೊಪ್ಪನಾಡು ಪ್ರೌಢಶಾಲೆಯ ಶಾಲಾ ವಾರ್ಷಿಕ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಈ ಶಾಲೆಯು ನನ್ನ ವೈಯಕ್ತಿಕ ಬೆಳವಣಿಗೆಗೆ ತನ್ನದೆಯಾದ ಕೊಡುಗೆಯನ್ನು ನೀಡಿದೆ ಎಂದಿಗೂ ಈ ಶಾಲೆಯ ಋಣವನ್ನು ಮರೆಯಲು ಸಾಧ್ಯವಿಲ್ಲ. ನಾನು ಹಿರಿಯ ಸರಕಾರಿ ಅಧಿಕಾರಿಯಾಗಿದ್ದರೂ ಕೂಡ ಅಲ್ಲಿ ನನ್ನ ವೃತ್ತಿಪರತೆಯನ್ನು ಸಾಬೀತುಪಡಿಸಲು ಆತ್ಮಸ್ಥೈರ್ಯ, ಜ್ಞಾನ ಸಾಮರ್ಥ್ಯದಿಂದ ಈ ಶಾಲೆಯ ಶಿಕ್ಷಕರು ಕಾರಣಿಭೂತರೆಂದು ಭಾವುಕರಾಗಿ ಅವರು ಹೇಳಿದರು.ರಾಜ್ಯದ ಉನ್ನತ ಅಧಿಕಾರಿಯಾಗಿದ್ದರೂ ವಿದ್ಯಾರ್ಥಿ ಎಂಬ ಭಾವನೆ ಹಳೆನೆನಪುಗಳಿಂದ ತುಂಬಿಕೊಂಡವು. ನಿತ್ಯ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಮುಂದಿನ ಭವಿಷ್ಯಕ್ಕೆ ಆರೋಗ್ಯವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬಹುದೆಂದು ಕರೆ ನೀಡಿದರು.
ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕ.ರಾ.ಪ್ರಾ.ಶಾ.ಶಿ.ಸಂಘದ ಉಪಾಧ್ಯಕ್ಷರಾದ ಹಂಚೆಟ್ಟಿರ ಕರುಂಬಯ್ಯ, ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನಿವೃತ್ತ ಉಪ ಅರಣ್ಯಾ ಸಂರಕ್ಷಣಾಧಿಕಾರಿ ಎಂಎಸ್.ಸುರೇಶ್ ಚಂಗಪ್ಪ, ಮಾಜಿ ಸೈನಿಕ ಪಿ.ಎಸ್.ಲಕ್ಷ್ಮೀನಾರಾಯಣ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಕೆ.ಎಸ್. ಇಂದಿರಾ ಉಪಸ್ಥಿತರಿದ್ದರು.
ನಂತರ ಮಕ್ಕಳಿಗೆ ಕ್ರೀಡಾಕೂಟಗಳು ನೆರವೇರಿಸಲಾಯಿತು.