ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಭಾನುವಾರ ಮಾಹಿತಿ ಕಾರ್ಯಾಗಾರ ಹಾಗೂ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಭಾನುವಾರ ಮಾಹಿತಿ ಕಾರ್ಯಾಗಾರ ಹಾಗೂ ಸಭೆ ನಡೆಯಿತು.ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾದ ಕಾರ್ಯಾಗಾರದಲ್ಲಿ ಸಮುದಾಯ ಆರೋಗ್ಯ ಇಲಾಖೆಯ ಅಧಿಕಾರಿ ರೋಷಿತ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎನಿಮೀಯ (ರಕ್ತಿಹೀನತೆ) ಕಾಯಿಲೆಯಿಂದ ಹೆಚ್ಚಾಗಿ ಬಳಲುತ್ತಿದ್ದಾರೆ. ಹುಚ್ಚು ನಾಯಿ ಮತ್ತು ಸಾಕು ನಾಯಿಗಳು ಕಚ್ಚುವುದು ಮತ್ತು ಆಕಸ್ಮಿಕವಾಗಿ ಹಲ್ಲು ತಗುಲಿ ಗಾಯ, ಉಗುರಿನಿಂದ ಪರಚಿದಾಗ ಉಂಟಾಗುವ ಗಾಯಗಳನ್ನು ನಿರ್ಲಕ್ಷ್ಯಿಸದೆ ಕೂಡಲೇ ಆರೋಗ್ಯ ಕೇಂದ್ರಗಳಿಗೆ ತೆರಳಿ ಚುಚ್ಚು ಮದ್ದುಗಳನ್ನು ಹಾಕಿಸಿಕೊಳ್ಳಬೇಕು. ಇಲ್ಲದಿದ್ದರೆ ರೇಬಿಸ್ ಕಾಯಿಲೆಗೆ ತುತ್ತಾಗಿ ಮರಣ ಹೊಂದುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂದರು.ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಯಶೋದಾ ಮಾತನಾಡಿ, ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ಜಲ ಸಂರಕ್ಷಿಸಬೇಕಾಗಿದೆ. ಪ್ರತಿಯೊಂದು ಜೀವಿಗೂ ನೀರು ಪ್ರಮುಖವಾಗಿದ್ದು, ಇದನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾನ್ಬೈಲ್ ಶ್ರೀ ಕ್ಷೇ.ಧ.ಗ್ರಾ.ಯೋ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸದಸ್ಯೆ ಕಮಲಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಈ ಸಭೆಯಲ್ಲಿ ಕಾನ್ಬೈಲ್ ವ್ಯಾಪ್ತಿಯ ಸ್ವಸಹಾಯ ಸಂಘದ 50ಕ್ಕೂ ಮಿಕ್ಕಿ ಸದಸ್ಯರು ಪಾಲ್ಗೊಂಡಿದ್ದರು.
ಚಿತ್ರ.2: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಮಾಹಿತಿ ಕಾರ್ಯಗಾರ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.