ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ 28 ಮಕ್ಕಳು ಪಾಲ್ಗೊಂಡಿದ್ದು, ಮೊದಲ 3 ಸ್ಥಾನಗಳನ್ನು ಕ್ರಮವಾಗಿ ಆದ್ವಿಕ್, ಚರಿಸ್ಮಾ ಎಂ.ಎಚ್., ಮತ್ತು ಶ್ರೀನ್ಯ ಪಡೆದರು.5 ವರ್ಷ ಮೇಲ್ಪಟ್ಟ ಮಕ್ಕಳ ಸ್ಪರ್ಧೆಯಲ್ಲಿ 25 ಮಕ್ಕಳು ಪಾಲ್ಗೊಂಡಿದ್ದು ಮೊದಲ 3 ಸ್ಥಾನಗಳನ್ನು ವಿಸ್ಮಿತ ಶೇಖರ್, ವಿನಯ ಪ್ರಶಾಂತ್ ಮತ್ತು ಅಮರನಾಥ್ ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹ ಬಹುಮಾನಗಳಾಗಿ ಶ್ರೀಕೃಷ್ಣ ಚರಿತ್ರೆ ಪುಸ್ತಕವನ್ನು ವಿತರಿಸಿದರು.ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಪತ್ರಕರ್ತರಾದ ಕೆ.ತಿಮ್ಮಪ್ಪ, ಬಿ.ಸಿ.ದಿನೇಶ್ ಹಾಗೂ ನೃತ್ಯ ಕಲಾವಿದ ಶಾನು ಮತ್ತು ರಮ್ಯ ದಿನೇಶ್ ಕಾರ್ಯನಿರ್ವಹಿಸಿದರು.ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ನೂರಾರು ಸುತ್ತ ಮುತ್ತಲಿನ ಭಕ್ತಾದಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ದೇವಾಲಯ ಸಮಿತಿ ದಾಸಂಡ ರಮೇಶ್ ಚಂಗಪ್ಪ, ಕಾರ್ಯದರ್ಶಿ ಶಿವಪ್ಪ, ಸಮಿತಿ ಸದಸ್ಯರಾದ ರುಕ್ಮಯ್ಯ ರಾಮಚಂದ್ರ ಕಿರಣ್ ಡಿ.ಎಂ., ಉಣಿಪ್ರಕಾಶ್, ದಾಸಂಡ ಜಗದೀಶ್, ದಾಸಂಡ ರಂಜನ್ ಮತ್ತಿತರರು ಯಶಸ್ವಿಯಾಗಿ ಮುನ್ನಡೆಸಿದರು.