ಕನ್ನಡಪ್ರಭ ವಾರ್ತೆ ಉಡುಪಿಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ಎದ್ದಿರುವ ಭಿನ್ನಮತ, ಎಲ್ಲ ವಿವಾದಗಳಿಗೂ ಇತಿಶ್ರೀ ಹಾಕುವ ಕಾಲ ಕೂಡಿಬಂದಿದೆ. ಸದ್ಯದಲ್ಲೇ ರಾಜ್ಯಾಧ್ಯಕ್ಷರು ಯಾರಾಗುತ್ತಾರೆ ಅನ್ನೋದು ಗೊತ್ತಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಕಾಪುವಿನ ಹೊಸ ಮಾರಿಗುಡಿಯ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಕೆಶಿ ಹಿಂದುತ್ವ ವಿಶೇಷಾರ್ಥ ಇಲ್ಲ:
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾಫ್ಟ್ ಹಿಂದುತ್ವ ಅನುಸರಿಸುತಿದ್ದಾರೆ ಎಂಬ ವಿವಾದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರು ಈಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಆದರೆ ಇದಕ್ಕೆ ವಿಶೇಷವಾದ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.ಆಡಳಿತ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ, ಬರುವ ದಿನಗಳಲ್ಲಿ ಎಲ್ಲವನ್ನು ಬಹಿರಂಗವಾಗುತ್ತದೆ. ಡಿಸೆಂಬರ್ನಲ್ಲಿ ಡಿಕೆಶಿ ಸಿಎಂ ಆಗ್ತಾರೆ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಅವರು ಮೂರು ತಿಂಗಳು ತಡವಾಗಿ ಹೇಳಿದ್ದಾರೆ. ಡಿಸೆಂಬರ್ಗೂ ಮೊದಲೇ ಆಗುತ್ತದೆ ಎಂದರು.ಬಜೆಟ್ - ಸರ್ಕಾರದಲ್ಲಿ ಹಣ ಇಲ್ಲ:
ಬಿಜೆಪಿ ನಾಯಕರ ಸಭೆಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಲು ಭಾನುವಾರ ಸಂಜೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಪು ಕಡಲ ತೀರದಲ್ಲಿ ಪಕ್ಷದ ನಾಯಕರ ಜೊತೆ ಸಭೆ ನಡೆಸಿದರು.
ಕಡಲ ತೀರದಲ್ಲಿ ವಿಹಾರ ನಡೆಸಿ, ಅಲ್ಲಿಯೇ ಸ್ವಲ್ಪ ಹೊತ್ತು ಕುಳಿತು, ಜಿಲ್ಲೆಯ ಬಿಜೆಪಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜಾ, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಜೊತೆ ಮಾತುಕತೆ ನಡೆಸಿದರು. ನಂತರ ಮಾರಿ ಗುಡಿಗೆ ತೆರಳಿದರು.----------------
ಡಿಕೆಶಿ ಹತಾಶರಾಗಿದ್ದಾರೆ...ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿನಿಮಾ ಇಂಡಸ್ಟ್ರಿಗೆ ಎಚ್ಚರಿಕೆ ನೀಡಿದ್ದು, ಅವರ ಹತಾಶೆ ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಅವರು ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದೊಳಗಿ ಗೊಂದಲ, ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆಯಿಂದ ಈ ರೀತಿ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ವಿಚಲಿತರಾಗಿದ್ದಾರೆ, ರಾಜಣ್ಣ ಸಹಿತ ಇತರ ಸಚಿವರ ಹೇಳಿಕೆಯಿಂದ ಇದು ಅರಿವಾಗುತ್ತಿದೆ ಎಂದರು.ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಹೇಳಲಾಗದ ಮಾತನ್ನು ಸಿನಿಮಾ ಇಂಡಸ್ಟ್ರಿಯವರಿಗೆ ಹೇಳಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದಬ್ಬಾಳಿಕೆ ದೌರ್ಜನ್ಯಕ್ಕೆ ಅವಕಾಶ ಇಲ್ಲ ಎಂದು ಬಿವೈವಿ ಹೇಳಿದರು.