ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣ ತಾಲೂಕಿನಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್ಸೀಡ್ ತೂಗುಕತ್ತಿ ನೇತಾಡುತ್ತಿದೆ.
ನಿರ್ದೇಶಕರಿಗೆ ನೋಟಿಸ್?:
ಟಿಎಪಿಎಂಎಸ್ ಗೋದಾಮಿನಿಂದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ನಿರ್ದೇಶಕರಿಗೆ ಸಹಕಾರ ಇಲಾಖೆಯ ಉಪನಿಬಂಧಕರು ನಿರ್ದೇಶಕರಿಗೆ ನೋಟಿಸ್ ನೀಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳೊಂದಿಗೆ ಉತ್ತರ ನೀಡುವಂತೆ ತಿಳಿಸಲಾಗಿದೆ. ತಪ್ಪಿದಲ್ಲಿ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಪ್ರಶ್ನಿಸಿದೆ.ಚುನಾವಣೆ ಹೊಸ್ತಿಲಲ್ಲೇ ತಲೆಬಿಸಿ: ಹಾಲಿ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಅವಧಿ ಡಿ.8ಕ್ಕೆ ಮುಕ್ತಾಯವಾಗಿಲಿದ್ದು, ಈ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಆಯ್ಕೆಗೆ ಡಿ.3ಕ್ಕೆ ಚುನಾವಣೆ ನಿಗದಿಯಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ನ.27ರಂದು ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಹೊಸ್ತಿಲಿನಲ್ಲೇ ಅಕ್ಕಿ ಪ್ರಕರಣ ಹೊರಗೆ ಬಂದಿರುವುದು ಸಂಸ್ಥೆಯ ಹಾಲಿ ನಿರ್ದೇಶಕರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸೂಪರ್ಸೀಡ್ ಮಾಡಿಸುವ ಯತ್ನ: ಪ್ರಸ್ತತ ಹಾಲಿ ಟಿಎಂಪಿಸಿಎಂಎಸ್ ಆಡಳಿತ ಮಂಡಳಿತ ಮಂಡಳಿ ಜೆಡಿಎಸ್ ತೆಕ್ಕೆಯಲ್ಲಿದೆ. ಅಕ್ಕಿ ನಾಪತ್ತೆ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್, ಜೆಡಿಎಸ್ ಆಡಳಿತ ಮಂಡಲಿ ಇರುವ ಸಂಸ್ಥೆಯ ಆಡಳಿತ ಮಂಡಳಿಯನ್ನು ಸೂಪರ್ಸೀಡ್ ಮಾಡಿಸುವ ಹುನ್ನಾರ ನಡೆಸಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಮುಖಂಡರು ಪಕ್ಷದ ವರಿಷ್ಠರ ಮೇಲೆ ಈ ವಿಚಾರದಲ್ಲಿ ಸಾಕಷ್ಟು ಒತ್ತಡ ಹೇರುತ್ತಿದ್ದು, ಟಿಎಪಿಸಿಎಂಎಸ್ ಆಡಳಿತ ಮಂಡಳಿಯನ್ನು ಸೂಪರ್ಸೀಡ್ ಮಾಡಿಸುವ ಪ್ರಯತ್ನಗಳು ಸಾಗಿದೆ ಎಂಬ ಚರ್ಚೆ ವ್ಯಾಪಕವಾಗಿದೆ.ಬಾಕ್ಸ್..............
ಪ್ರತಿಷ್ಥಿತ ಟಿಎಪಿಸಿಎಂಎಸ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಡಿ.3ರಂದು ಚುನಾವಣೆ ನಿಗದಿಯಾಗಿದ್ದು, ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಬೆಂಬಲಿತರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಹುತೇಕ ಹಾಲಿ ನಿರ್ದೇಶಕರು ಹಾಗೂ ಕೆಲ ಹೊಸ ಮುಖಗಳು ಈ ಬಾರಿ ಚುನಾವಣಾ ಕಣಕ್ಕೆ ಇಳಿದಿದೆ. ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಸಹ ಈ ಬಾರಿ ಚುನಾವಣೆ ಕಣಕ್ಕೆ ನಾಮಪತ್ರ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿರುವ ಟಿಎಪಿಸಿಎಂಎಸ್ ಗೋದಾಮು.