ಕನ್ನಡಪ್ರಭ ವಾರ್ತೆ ಸಿರಿಗೆರೆ
ಸಿರಿಗೆರೆ ಹೋಬಳಿ ಡಿ.ಮದಕರಿಪುರ ಗ್ರಾಮದಲ್ಲಿ ಮೂರು ಕೋಟಿ ರು.ವೆಚ್ಚದಲ್ಲಿ ಡಿ.ಮದಕರಿಪುರ ಗ್ರಾಮದಿಂದ ತಣಿಗೆಹಳ್ಳಿವರೆಗೆ ನೂತನ ಸಿಸಿ.ರಸ್ತೆ, ಚರಂಡಿಗಳ ನಿರ್ಮಾಣ, ನೂತನ ಶಾಲಾ ಕಟ್ಟಡ, ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಎಂಜಿನಿಯರ್ ಹಾಗೂ ಗುತ್ತಿಗೆದಾರರು ಕಾಮಗಾರಿ ಕಳಪೆ ಆಗದಂತೆ ಎಚ್ಚರವಹಿಸಬೇಕೆಂದರು.
ರಾಜ್ಯದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರ 63 ಜಾತಿಗಳಿಗೆ ಶೇ.5 ರಷ್ಟು ಮೀಸಲಾತಿ ನೀಡಿತ್ತು. ಈಗಿನ ಸರ್ಕಾರ ಲಂಬಾಣಿ, ಕೊರಚ, ಕೊರಮ, ಭೋವಿ ಜನಾಂಗಕ್ಕೆ ಶೇ.3 ರಷ್ಟು, ಅಲೆಮಾರಿಗಳಿಗೆ ಶೇ.1 ರಷ್ಟು ಮೀಸಲಾತಿ ನೀಡಿರುವುದು ಅನ್ಯಾಯವಲ್ಲವೆ? ಇದರ ವಿರುದ್ದ ಮೊದಲು ನೀವು ಎಚ್ಚೆತ್ತುಕೊಂಡು ಹೋರಾಡಬೇಕೆಂದು ತಿಳಿಸಿದರು.ಹೊಳಲ್ಕೆರೆ ವಿಧಾನಸಭೆ ನೆರೆಯ ಚಿಕ್ಕಮಗಳೂರು ಜಿಲ್ಲೆಯ ಶಿವನಿ, ಅಜ್ಜಂಪುರದವರೆಗೆ ವಿಸ್ತೃತವಾಗಿ ಹರಡಿದೆ. ತಾಲೂಕಿನ 493 ಹಳ್ಳಿಗಳಲ್ಲಿಯೂ ಸಿ.ಸಿ ರಸ್ತೆ, ರೈತರಿಗೆ ವಿದ್ಯುತ್, ಶಾಲಾ-ಕಾಲೇಜುಗಳನ್ನು ನಿರ್ಮಿಸಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿದ್ದೇನೆ. ಸಾರ್ವಜನಿಕರ ಮಧ್ಯೆಯಿದ್ದುಕೊಂಡು ಕಷ್ಟ-ಸುಖ ಸಮಸ್ಯೆಗಳನ್ನು ಆಲಿಸಿ ಸಾಮಾನ್ಯ ಜ್ಞಾನವಿಟ್ಟುಕೊಂಡು ಕೆಲಸ ಮಾಡುವ ರಾಜಕಾರಣಿ ನಾನು. ಆಶ್ವಾಸನೆ ಕೊಡುವವನಲ್ಲ. ಎಲ್ಲಿ ಏನು ಕೆಲಸ ಆಗಬೇಕೆಂಬುದನ್ನು ಹುಡುಕಿ ಕ್ಷೇತ್ರದ ಅಭಿವೃದ್ಧಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದರು.
ಹೊಳಲ್ಕೆರೆ ವಿಧಾನಸಭೆ ಕ್ಷೇತ್ರದಲ್ಲಿ ತಾವು ಶಾಸಕರಾದಾಗ ಯಾವುದೇ ಸರ್ಕಾರವಿದ್ದರೂ ಅನದಾನದ ಹೊಳೆ ಹರಿಸಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಗ್ರಾಮಗಳಿಗೆ ಅಗತ್ಯವಾಗಿ ಬೇಕಾದ ಅಭಿವೃದ್ಧಿ ಕೆಲಸಗಳ ಗಮನಕ್ಕೆ ತಂದರೆ ಆದ್ಯತೆ ಮೇರೆಗೆ ಎಲ್ಲವನ್ನು ನಿರ್ವಹಿಸುತ್ತೇನೆ. ಪ್ರತಿ ಹಳ್ಳಿಗೂ ಕುಡಿವ ನೀರು ಪೂರೈಕೆ ಮಾಡುವ ಕೆಲಸ ಭರದಿಂದ ಸಾಗಿದೆ. ಕೆರೆಗಳಿಗೆ ಶೀಘ್ರ ಭದ್ರೆ ನೀರು ಹರಿದು ಬರಲಿದೆ ಎಂದು ಚಂದ್ರಪ್ಪ ಹೇಳಿದರು.