ಹೆಚ್ಚು ಡಿಎಪಿ ಪೂರೈಸಿ: ಬಸವಂತಪ್ಪ

KannadaprabhaNewsNetwork |  
Published : May 28, 2025, 01:50 AM IST
ಕ್ಯಾಪ್ಷನ27ಕೆಡಿವಿಜಿ34ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ರೈತರಿಗೆ ಬಿತ್ತನೆ ಬೀಜ ವಿತರಿಸಿದರು. | Kannada Prabha

ಸಾರಾಂಶ

ರೈತರಿಗೆ ಅವಶ್ಯವಿರುವ ವಿವಿಧ ತಳಿಯ ಮೆಕ್ಕೆಜೋಳ, ತೊಗರಿ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದೆ. ಅಗತ್ಯಕ್ಕೆ ತಕ್ಕಂತೆ ವಿತರಣೆ ಮಾಡಲಾಗುತ್ತದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.

- ಆನಗೋಡು ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ರೈತರಿಗೆ ಅವಶ್ಯವಿರುವ ವಿವಿಧ ತಳಿಯ ಮೆಕ್ಕೆಜೋಳ, ತೊಗರಿ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದೆ. ಅಗತ್ಯಕ್ಕೆ ತಕ್ಕಂತೆ ವಿತರಣೆ ಮಾಡಲಾಗುತ್ತದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.

ತಾಲೂಕಿನ ಆನಗೋಡು ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ರೈತರಿಗೆ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಂಗಾರು ಪೂರ್ವದಲ್ಲಿಯೇ ಮಳೆ ಆರಂಭವಾಗಿದೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಅಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೇಡಿಕೆಗೆ ತಕ್ಕಂತೆ ಪೂರೈಸಿ:

ರೈತರ ಬೇಡಿಕೆಗಳಿಗೆ ತಕ್ಕಂತೆ ಬಿತ್ತನೆಬೀಜ, ರಸಗೊಬ್ಬರ ಸರಬರಾಜು ಮಾಡಬೇಕು. ಈ ಭಾಗದಲ್ಲಿ 3175 ಕ್ವಿಂಟಲ್ ಡಿಎಪಿ ಬೇಡಿಯಿದ್ದು, 3115 ಕ್ವಿಂ. ಡಿಎಪಿ ದಾಸ್ತಾನು ಇದೆ. ಯೂರಿಯಾ 6293 ಕ್ವಿಂ. ಬೇಡಿಕೆ ಇದೆ. 14500 ಕ್ವಿಂ. ದಾಸ್ತಾನು ಇದೆ. ರೈತರು ಯೂರಿಯಾಗಿಂತ ಅತಿ ಹೆಚ್ಚು ಡಿಎಪಿ ರಸಗೊಬ್ಬರ ಬಳಸುವುದರಿಂದ ಕೇಂದ್ರ ಸರ್ಕಾರ ಕೂಡಲೇ ಅಗತ್ಯಕ್ಕಿಂತ ಹೆಚ್ಚು ಡಿಎಪಿ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು.

ಹೆಚ್ಚಿನ ಬೆಲೆಗೆ ಮಾರಿದರೆ ಕ್ರಮ:

1 ಬ್ಯಾಗ್‌ಗೆ ಡಿಎಪಿ ₹1350, ಪೋಟಾಷ್ ₹1625, 20:20 ಗೊಬ್ಬರ ₹1400 ದರ ನಿಗದಿ ಮಾಡಲಾಗಿದೆ. ಇದಕ್ಕಿಂತ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಕಂಡುಬಂದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ರೈತರು ಕೂಡಲೇ ಶಾಸಕರು ಅಥವಾ ಅಧಿಕಾರಿಗಳ ಗಮನಕ್ಕೆ ತರಬೇಕು. ಕೆಲವು ಸೊಸೈಟಿ, ಅಂಗಡಿಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ₹100, ₹200 ಹೆಚ್ಚಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತರು ದೂರು ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ನೀಡಬೇಕೆಂದು ಸೂಚನೆ ನೀಡಿದರು.

ಡಿಎಪಿ ಜೊತೆ ಸಂಯುಕ್ತ ಗೊಬ್ಬರ ಬಳಸಿ:

ಕೇವಲ 1 ಅಥವಾ 2 ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರವನ್ನು ರೈತರು ರೂಢಿಗತವಾಗಿ ಬಳಸುತ್ತಿದ್ದಾರೆ. ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರ ಇರುತ್ತದೆ. ಹಾಗಾಗಿ, ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಬೇಕೆಂದು ಶಾಸಕರು ಸಲಹೆ ನೀಡಿದರು.

ಈ ಸಂದರ್ಭ ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್, ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ, ಕೃಷಿ ಅಧಿಕಾರಿ ಶ್ರೀನಿವಾಸ್, ಗ್ರಾಪಂ ಪಿಡಿಒ ಸುಮಲತಾ, ಗ್ರಾಪಂ ಮಾಜಿ ಅಧ್ಯಕ್ಷ ನಸರುಲ್ಲ, ಗ್ರಾಪಂ ಸದಸ್ಯರಾದ ಬಸಣ್ಣ, ಕರಿಬಸಪ್ಪ, ಸಿರಾಜ್, ರಾಜಣ್ಣ, ಪ್ರಕಾಶ್ ಹಾಗೂ ಆನಗೋಡು, ಹಾಲುವರ್ತಿ, ಉಳುಪಿನಕಟ್ಟೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

- - -

-27ಕೆಡಿವಿಜಿ34:

ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ರೈತರಿಗೆ ಬಿತ್ತನೆ ಬೀಜ ವಿತರಿಸಿದರು.

PREV

Recommended Stories

ಡಾ.ಪ್ರಭಾಕರ್‌ ಕೋರೆ 78ನೇ ಜನ್ಮದಿನ ಅರ್ಥಪೂರ್ಣ ಆಚರಣೆ
ರಾಜಕೀಯ ದುರುದ್ದೇಶಕ್ಕೆ ದೇವಾಲಯಗಳ ಬಳಕೆ ಸಲ್ಲದು