ಅಮಾನಿಕೆರೆಯಿಂದ ಕುಡಿಯುವ ನೀರು ಪೂರೈಕೆ: ಜ್ಯೋತಿಗಣೇಶ್

KannadaprabhaNewsNetwork |  
Published : Oct 19, 2024, 12:32 AM IST
ಮರಳೂರು ಕೆರೆ ಕೋಡಿ- ಗಂಗಾ ಪೂಜೆ | Kannada Prabha

ಸಾರಾಂಶ

ನಗರದ ಮರಳೂರು ಅಮಾನಿಕೆರೆ ಸತತವಾಗಿ ಬಿದ್ದ ಮಳೆಯಿಂದ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುನಗರದ ಮರಳೂರು ಅಮಾನಿಕೆರೆ ಸತತವಾಗಿ ಬಿದ್ದ ಮಳೆಯಿಂದ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಕಳೆದ 2 ವರ್ಷಗಳ ಹಿಂದೆ ಅತಿವೃಷ್ಟಿಯಿಂದಾಗಿ ಮರಳೂರು ಅಮಾನಿಕೆರೆ ತುಂಬಿತ್ತು. ಇದನ್ನು ಹೊರತುಪಡಿಸಿದರೆ ಸುಮಾರು 30 ವರ್ಷಗಳಿಂದ ಈ ಕೆರೆ ಭರ್ತಿಯಾಗಿರಲಿಲ್ಲ. ಈಗ ಮತ್ತೊಮ್ಮೆ ಭರ್ತಿಯಾಗಿ ಕೋಡಿ ಬಿದ್ದಿರುವುದು ಈ ಭಾಗದ ಜನರು ಹಾಗೂ ರೈತರಲ್ಲಿ ಹರ್ಷ ಮೂಡಿಸಿದೆ.ಕೋಡಿ ಬಿದ್ದಿರುವ ಮರಳೂರು ಕೆರೆಗೆ , ಗ್ರಾಮದ ಪ್ರಧಾನ ಅಶೋಕಕುಮಾರ್, ಮಹಾನಗರ ಪಾಲಿಕೆಯ 28ನೇ ವಾರ್ಡ್‌ ಮಾಜಿ ಸದಸ್ಯ ಧರಣೇಂದ್ರಕುಮಾರ್ ಸೇರಿದಂತೆ ಈ ಭಾಗದ ಗ್ರಾಮಸ್ಥರ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಿದ ಶಾಸಕ ಜ್ಯೋತಿಗಣೇಶ್ ಅವರು ಕೆರೆಗೆ ಬಾಗಿನ ಅರ್ಪಿಸಿದರು. ಶಾಸಕ ಜ್ಯೋತಿಗಣೇಶ್ ಮಾತನಾಡಿ, ಮರಳೂರು ಅಮಾನಿಕೆರೆ ಕಳೆದ 25-30 ವರ್ಷಗಳಲ್ಲಿ ಇದು 2ನೇ ಬಾರಿಗೆ ಭರ್ತಿಯಾಗಿದೆ. ಕಳೆದ 2 ವರ್ಷದ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಕೆರೆ ತುಂಬಿತ್ತು. ಆ ಸಂದರ್ಭದಲ್ಲೂ ಕೆರೆಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಾಗಿತ್ತು. ಅದೇ ರೀತಿ ಇಂದು ಸಹ ಗ್ರಾಮಸ್ಥರ ಸಮ್ಮುಖದಲ್ಲಿ ಕೆರೆಗೆ ಬಾಗಿನ ಅರ್ಪಿಸಲಾಗಿದೆ ಎಂದರು.ಮರಳೂರು ಅಮಾನಿಕೆರೆಯನ್ನು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಮುಂದಿನ ದಿನಗಳಲ್ಲಿ ಬಳಕೆ ಮಾಡಿಕೊಳ್ಳಲಾಗುವುದು. ಹಾಗಾಗಿ ಕೆರೆಯನ್ನು ಸಂಪೂರ್ಣವಾಗಿ ಅಚ್ಚುಕಟ್ಟುಗೊಳಿಸಿ ಹೇಮಾವತಿ ನೀರನ್ನು ಹರಿಸಿ, ಕುಡಿಯುವ ನೀರು ಪೂರೈಕೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪಾಲಿಕೆ ಮಾಜಿ ಸದಸ್ಯ ಧರಣೇಂದ್ರಕುಮಾರ್ ಮಾತನಾಡಿ, ಮರಳೂರು ಅಮಾನಿಕೆರೆ ಈ ಭಾಗದ ರೈತರಿಗೆ ಜೀನವಾಡಿ. ಕಳೆದ 25-30 ವರ್ಷಗಳಲ್ಲಿ ೨ನೇ ಬಾರಿಗೆ ಕೆರೆ ತುಂಬಿರುವುದು ನಮ್ಮೆಲ್ಲರಿಗೂ ಹರ್ಷ ತಂದಿದೆ. ಈ ಕೆರೆಯಲ್ಲಿ ನೀರು ತುಂಬಿದ್ದರೆ ಅಂತರ್ಜಲ ಮಟ್ಟವೂ ವೃದ್ಧಿಯಾಗಿ ರೈತರ ತೋಟ, ಜಮೀನುಗಳಿಗೆ ಬೋರ್‌ವೆಲ್‌ಗಳಿಂದ ನೀರು ಹರಿಸಲು ಅನುಕೂಲವಾಗುತ್ತದೆ ಎಂದರು.ಮರಳೂರು ಅಮಾನಿಕೆರೆ ನಮ್ಮೆಲ್ಲರಿಗೂ ತಾಯಿ ಸಮಾನ. ನಮ್ಮ ಪೂರ್ವಜರ ಕಾಲದಿಂದಲೂ ಸಂಪ್ರದಾಯ ಬದ್ಧವಾಗಿ ಪೂಜೆ ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗೆಯೇ ಇಂದು ಸಹ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಾಗಿದೆ ಎಂದು ಹೇಳಿದರು.ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮೂಡ್ಲಗಿರಿಯಪ್ಪ, ಸಹಾಯಕ ಎಂಜಿನಿಯರ್‌ಗಳಾದ ತಿಪ್ಪೇಸ್ವಾಮಿ, ಸಂತೋಷ್, ಗ್ರಾಮಸ್ಥರಾದ ಕೃಷ್ಣಮೂರ್ತಿ, ಪೃಥ್ವಿ, ರವಿಗೌಡ, ಮದ್ರಾಸ್ ಕೃಷ್ಣಪ್ಪ, ಮರಳೂರು ನಾಗರಾಜು, ಕೃಷ್ಣಪ್ಪ, ಛೇರ್ಮನ್ ಭೀಮಯ್ಯ, ರವೀಶಯ್ಯ, ಮೂರ್ತಿ, ಸುರೇಶ್, ಧರ್ಮಸ್ಥಳ ಬೇಕರಿ ಮಂಜಣ್ಣ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ