ಕನ್ನಡಪ್ರಭ ವಾರ್ತೆ ಹಲಗೂರು
ನಿಟ್ಟೂರು ಕೋಡಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಹೈನುಗಾರಿಯಲ್ಲಿ ಹೆಚ್ಚು ಲಾಭ ಬಂದರೆ ಮಾತ್ರ ನೀವುಗಳು ಬೆಳೆಯಲು ಸಾಧ್ಯ. ಆದ್ದರಿಂದ ಗುಣಮಟ್ಟದ ಹಾಲನ್ನು ಡೇರಿಗೆ ಸರಬರಾಜ ಮಾಡುವಂತೆ ಸಲಹೆ ನೀಡಿದರು.
ಈ ಗ್ರಾಮದಲ್ಲಿ ಹೆಚ್ಚು ಹಾಲು ಸರಬರಾಜು ಮಾಡುತ್ತಿದ್ದು, ಹಾಲು ಕರೆಯುವ ಯಂತ್ರ ಬೇಕಾಗಿದೆ ಎಂದು ಬೇಡಿಕೆ ಸಲ್ಲಿಸಿದ್ದಾರೆ. ನಾನು ಮನ್ಮಲ್ ಸಭೆಯಲ್ಲಿ ಹಾಲು ಕರೆಯುವ ಯಂತ್ರ 250 ಬೇಕು ಎಂದ ಕೇಳಿದ್ದೆ. ಅವರು ಈಗ 104 ನೀಡಿದ್ದಾರೆ. ಮೊದಲು ಯಾರು ಅರ್ಜಿ ಸಲ್ಲಿಸಿದ್ದಾರೆ ಅವರಿಗೆ ನೀಡುತ್ತೇವೆ ನಂತರ ಹಂತ ಹಂತವಾಗಿ ಎಲ್ಲರಿಗೂ ನೀಡಲಾಗುವುದು ಎಂದರು.ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರ ಸಹಕಾರದಿಂದ ನಾನು ಮನ್ಮಲ್ ನಿರ್ದೇಶಕನಾಗಿದ್ದೇನೆ. ನಾನು ನಿರ್ದೇಶಕನಾದ ಮೇಲೆ ನಮ್ಮ ಮನ್ಮಲ್ 6ನೇ ಸ್ಥಾನದಲ್ಲಿತ್ತು ಈಗ ಜಿಲ್ಲೆಯಲ್ಲಿ 2ನೇ ಸ್ಥಾನಕ್ಕೆ ಬಂದಿದೆ ಎಂದರು.
ಕಾರ್ಯಕ್ರಮದಲ್ಲಿ ಕೆ.ಸಿ.ಗೌಡ, ರಾಜೇಗೌಡ, ಮಂಚೇಗೌಡ, ಕೃಷ್ಣ, ಲಿಂಗೇಗೌಡ ,ನಂಜುಂಡೇಗೌಡ, ಚಂದ್ರಶೇಖರ, ಕೃಷ್ಣೆಗೌಡ, ರುಕ್ಮಂಗದಾ ಚಾರಿ, ಗೊಲ್ಲರಹಳ್ಳಿ ಕಾರ್ಯದರ್ಶಿ ಶಿವಲಿಂಗೇಗೌಡ ಡಿ.ಕೆ.ಹಳ್ಳಿ ಕಾರ್ಯದರ್ಶಿ ಬಾಬು ಸೇರಿದಂತೆ ಇತರರು ಇದ್ದರು.
ಮಂಡ್ಯ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇಕೆ ನಾಸ್ತಿಕ ಭಗತ್ಸಿಂಗ್ ಜನ್ಮದಿನದ ಅಂಗವಾಗಿ ನಡೆಯುವ ಕಾರ್ಯಕ್ರಮನ್ನು ಮೂಢನಂಬಿಕೆ, ವಾಸ್ತವ ಮತ್ತು ಭ್ರಮೆ ಕೃತಿ ಲೋಕಾರ್ಪಣೆ ಮಾಡುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಒಕ್ಕೂಟದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ಅಧ್ಯಕ್ಷತೆ ವಹಿಸುವರು. ರೈತ ಮುಖಂಡ ಟಿ.ಎಲ್.ಕೃಷ್ಣೇಗೌಡ, ಪತ್ರಕರ್ತ ಬಿ.ಆರ್.ರಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದರು.
ವೈಚಾರಿಕ ಚಳವಳಿಯ ಭವಿಷ್ಯ ಮತ್ತು ಸಂಘಟನೆ ಕುರಿತು ಪ್ರೊ.ನರೇಂದ್ರ ನಾಯಕ್ ಸಂವಾದ ನಡೆಸಿಕೊಡುವರು. ಪ್ರಾಂಶುಪಾಲರಾದ ಡಿ.ವಿ.ಸುವರ್ಣಾ ಅಧ್ಯಕ್ಷತೆ ವಹಿಸುವರು. ಲೇಖಕ ವೆಂಕಟಯ್ಯ ಅಪ್ಪಗೆರೆ, ಪ್ರೊ.ಪಂಡಿತಾರಾಧ್ಯ, ಡಾ.ಪ್ರವೀಣ್ ರಾಮಚಂದ್ರ ಆಗಮಿಸುವರು ಎಂದರು.