ಹುಣಸಗಿ: ಸುರಪುರ ಕ್ಷೇತ್ರದ ಜನಪರ ಅಭಿವೃದ್ಧಿ ಹಾಗೂ ಜನ ಸೇವೆಗೆ ಕೈಗೆ ಬೆಂಬಲಿಸಿ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ತಂದೆ ದಿ.ರಾಜಾ ವೆಂಕಟಪ್ಪ ನಾಯಕ ಅವರು ನುಡಿದಂತೆ ನಡೆದಿದ್ದಾರೆ. ಪ್ರತಿಯೊಬ್ಬರ ವಿಶ್ವಾಸಕ್ಕೆ ತೆಗೆದುಕೊಂಡು ಅನೇಕ ಅಭಿವೃದ್ಧಿಯೂ ಮಾಡಿದ್ದಾರೆ. ತಂದೆಯವರ ಹಾದಿಯಲ್ಲಿ ನಾನು ಕೂಡ ನಿಮ್ಮ ಸೇವೆಗೆ ಸಿದ್ಧನಾಗಿದ್ದೇನೆ. ಈ ಬಾರಿ ಲೋಕಸಭೆ ಹಾಗೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆಯಲ್ಲಿ ನೀಡಿದ 5 ಗ್ಯಾರಂಟಿಗಳಾದ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಭರವಸೆಗಳೆಲ್ಲವೂ ಈಡೇರಿಸುವ ಕೆಲಸ ಕಾಂಗ್ರೆಸ್ ಮಾಡಿದೆ. ಹೀಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲಿಸಿ ಆರಿಸಿ ತರಬೇಕು ಎಂದು ಜನರಲ್ಲಿ ಬೇಡಿಕೊಂಡರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಮಾತನಾಡಿ, ಬಿಜೆಪಿಗೆ ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಬಿಜೆಪಿಗೆ ದೇಶದ ಚಿಂತಿ, ಕಾಂಗ್ರೆಸ್ಗೆ ದೇಶದೊಂದಿಗೆ ಜನರ ಚಿಂತೆಯೂ ಇದೆ. ಹೀಗಾಗಿ ಪಂಚಗ್ಯಾರಂಟಿ ಯೋಜನೆಗಳೆಲ್ಲವೂ ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಕಾಂಗ್ರೆಸ್ ಸರಕಾರ ಮಾಡಿದೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರನ್ನು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ತಿಳಿಸಿದರು.