ಸಮರ್ಥ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆಗೆ ಬೆಂಬಲ

KannadaprabhaNewsNetwork |  
Published : Apr 24, 2024, 02:16 AM IST
ಕಲ್ಕುಳಿ ವಿಠಲ ಹೆಗ್ಡೆ | Kannada Prabha

ಸಾರಾಂಶ

ಮಲೆನಾಡಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಲೋಕಸಭೆಯಲ್ಲಿ ಸಮಸ್ಯೆಗಳನ್ನು ಮಂಡಿಸಬಹುದಾದ ಸಾಮರ್ಥ್ಯವಿರುವ ಅಭ್ಯರ್ಥಿ ಗೆಲ್ಲಿಸಬೇಕು ಎಂಬ ನಮ್ಮ ಅಭಿಪ್ರಾಯದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಸಮರ್ಥರಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಲಿದ್ದೇವೆ ಎಂದು ಮಲೆನಾಡು ಸಂರಕ್ಷಣಾ ವೇದಿಕೆ ಅಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ ಹೇಳಿದರು.

ಮಲೆನಾಡು ಸಂರಕ್ಷಣಾ ವೇದಿಕೆ ಅಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಲೆನಾಡಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಲೋಕಸಭೆಯಲ್ಲಿ ಸಮಸ್ಯೆಗಳನ್ನು ಮಂಡಿಸಬಹುದಾದ ಸಾಮರ್ಥ್ಯವಿರುವ ಅಭ್ಯರ್ಥಿ ಗೆಲ್ಲಿಸಬೇಕು ಎಂಬ ನಮ್ಮ ಅಭಿಪ್ರಾಯದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಸಮರ್ಥರಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಲಿದ್ದೇವೆ ಎಂದು ಮಲೆನಾಡು ಸಂರಕ್ಷಣಾ ವೇದಿಕೆ ಅಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ ಹೇಳಿದರು.ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟಾ ಶ್ರೀನಿವಾಸ ಪೂಜಾರಿ ಅವರು ಈಗಾಗಲೆ ವಿರೋಧ ಪಕ್ಷದ ನಾಯಕರ ಹುದ್ದೆ ಹೊಂದಿದ್ದಾರೆ. ಅವರು ಈ ಜಿಲ್ಲೆಯ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಿ. ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಪ್ರಮುಖ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ದನಿ ಎತ್ತಲಿ ಎಂದರು.

ಎರಡು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಶೋಭಾ ಕರಂದ್ಲಾಜೆ ಅವರಿಗೆ ಜಿಲ್ಲೆಯ ಮಲೆನಾಡಿನ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಲೆನಾಡಿನ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಮಾರಕವಾದ ಗೋಧವರ್ಮನ್ ತಿರುಮಲಪಾಡ್ ವರ್ಸಸ್ ಕೇಂದ್ರ ಸರಕಾರದ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಅರಣ್ಯ ಎಂಬುದಕ್ಕೆ ಹೊಸ ವ್ಯಾಖ್ಯಾನ ಬರೆದ ಪರಿಣಾಮ ಮಲೆನಾಡಿನಲ್ಲಿ ಸಮಸ್ಯೆಗಳು ಉದ್ಭವಿಸಿವೆ. ಸಾರ್ವಜನಿಕ ಶಾಲೆ, ಆಸ್ಪತ್ರೆ, ಕಟ್ಟಡ ನಿರ್ಮಿಸಲು ಜಾಗ ಇಲ್ಲದಂತಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಮನೆ, ನಿವೇಶನ ಇಲ್ಲದೆ ಕಾಯುತ್ತಿ ದ್ದಾರೆ. 9.94 ಲಕ್ಷ ಹೆಕ್ಟೇರ್ ಡೀಮ್ಡ್ ಪ್ರಸ್ತಾವನೆ ಹಸಿರು ಪೀಠದಲ್ಲಿ ಬಾಕಿ ಇದೆ. 50 ಮರಗಿಡಗಳಿದ್ದಲ್ಲಿ ಆದನ್ನು ಕಾಡು ಎಂದು ಘೋಷಿಸಿ ಮಲೆನಾಡಿನ ಜನರಿಗೆ ಕೊಡಲಿ ಪೆಟ್ಟು ನೀಡಿದ್ದಾರೆ ಎಂದು ಹೇಳಿದರು.ಮುಂದೊಂದು ದಿನ ಸುಪ್ರೀಂ ಕೋರ್ಟ್ ಕಠಿಣ ನಿರ್ಧಾರ ತೆಗೆದುಕೊಂಡರೆ ಸಾವಿರಾರು ಕುಟುಂಬಗಳು ಬೀದಿ ಪಾಲಾಗು ತ್ತವೆ. ಕುದುರೆಮುಖ ಉದ್ಯಾನವನದ ಹೆಸರಲ್ಲಿ ರಾಷ್ಟ್ರೀಯ ಹೆದ್ದಾರಿ 69 ಕಾಮಗಾರಿ ಮಾಡಲು ಅರಣ್ಯ ಇಲಾಖೆ ಬಿಡುತ್ತಿಲ್ಲ. ಮಲೆನಾಡಿನ ಕೃಷಿ ಮತ್ತು ಅಭಿವೃದ್ಧಿ ಯೋಜನೆಗೆ ಮಾರಕವಾದ ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಕೇಂದ್ರ ತುದಿಗಾಲಲ್ಲಿದೆ. ಅದನ್ನು ತಡೆಯಬೇಕು. ಹೆದ್ದಾರಿ 69 ರ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಅಡಕೆ ರೋಗಗಳ ಸಂಶೋಧನೆಗೆ ಸಿಇಸಿಆರ್‌ಐ ನಂತಹ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರಿಗೆ 99 ವರ್ಷಕ್ಕೆ ಲೀಸ್‌ಗೆ ನೀಡಿರುವ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆದು ಭೂ ರಹಿತರಿಗೆ ಹಂಚಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಎದ್ದೇಳು ಕರ್ನಾಟಕದ ಸುರೇಶ್ ಹಾಗಲಗಂಚಿ. ವಾಲ್ಮೀಕಿ ಸಂಘದ ಜಗದೀಶ್, ಸಂದೀಪ್, ರಿಜ್ವಾನ್, ಗಣೇಶ್, ಮುನ್ನಾ, ಸಯದ್ ಇದ್ದರು.ಪೋಟೋ ಪೈಲ್‌ ನೇಮ್‌ 23 ಕೆಸಿಕೆಎಂ 6

PREV

Recommended Stories

ಬಿಆರ್‌ಎಲ್ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಕಾಲ ಉಳಿಯುವ ಆಪ್ತಭಾವದ ಕವಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌