ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ಕೆಆರ್‌ಎಸ್ ಬೆಂಬಲಿಸಿ: ರವಿ ಕೃಷ್ಣಾರೆಡ್ಡಿ

KannadaprabhaNewsNetwork |  
Published : Feb 29, 2024, 02:05 AM IST
ಫೋಟೊ ಶೀರ್ಷಿಕೆ: 28ಹೆಚ್‌ವಿಆರ್9ಹಾವೇರಿ ನಗರದ ಜಿಲ್ಲಾಸ್ಪತ್ರೆ ಸಮೀಪ `ಕರ್ನಾಟಕಕ್ಕಾಗಿ ನಾವು' ಎಂಬ ಬೈಕ್‌ಜಾಥಾ ಮೂಲಕ ಆಗಮಿಸಿದ್ದ ರ‍್ಯಾಲಿಯನ್ನುದ್ದೇಶಿಸಿ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಬನ್ನಿ ಒಳ್ಳೆ ನಾಡನ್ನು ಕಟ್ಟೋಣ, ಸ್ವಚ್ಛ, ಭ್ರಷ್ಟಾಚಾರ ರಹಿತ ನಾಡನ್ನು ನಿರ್ಮಿಸೋಣ.

ಕನ್ನಡಪ್ರಭ ವಾರ್ತೆ ಹಾವೇರಿ

ಜನಪರ ಕಾಳಜಿಯ, ಸ್ವಚ್ಛ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕರನ್ನು ಮತ್ತು ಕೆಆರ್‌ಎಸ್ ಪಕ್ಷವನ್ನು ಬೆಂಬಲಿಸಿ ಎಂದು ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದರು.

ನಗರದ ಜಿಲ್ಲಾಸ್ಪತ್ರೆ ಸಮೀಪ "ಕರ್ನಾಟಕಕ್ಕಾಗಿ ನಾವು'''' ಎಂಬ ಬೈಕ್‌ ಜಾಥಾ ಮೂಲಕ ಆಗಮಿಸಿದ್ದ ಅವರು ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ದಂಡಿ ಸತ್ಯಾಗ್ರಹದಲ್ಲಿ ಮಹಾತ್ಮಾ ಗಾಂಧೀಜಿ ಜೊತೆ ಪಾದಯಾತ್ರೆಯಲ್ಲಿ ಕರ್ನಾಟಕದಿಂದ ಭಾಗವಹಿಸಿದ ಏಕೈಕ ವ್ಯಕ್ತಿ ಮೈಲಾರ ಮಹದೇವಪ್ಪನವರು ಅವಿಭಜಿತ ಧಾರವಾಡ ಜಿಲ್ಲೆಯವರು. ಇಂತಹ ಜಿಲ್ಲೆಯಲ್ಲಿ ಇಂದು ಕುಟುಂಬ ರಾಜಕಾರಣ, ಭ್ರಷ್ಟಾಚಾರ ಹೆಚ್ಚಾಗಿದೆ. ಬನ್ನಿ ಒಳ್ಳೆ ನಾಡನ್ನು ಕಟ್ಟೋಣ, ಸ್ವಚ್ಛ, ಭ್ರಷ್ಟಾಚಾರ ರಹಿತ ನಾಡನ್ನು ನಿರ್ಮಿಸೋಣ ಮುಂಬರುವ ಜಿಪಂ, ತಾಪಂ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿ ಎಂದರು.

ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ನಾವು ಒಪ್ಪಿಕೊಳ್ಳುವುದಿಲ್ಲ ಎಂದರು.

ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಎಸ್.ಎಚ್. ಮಾತನಾಡಿ, ತಮ್ಮ ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ರಾಜ್ಯದ ಜನರನ್ನು ಕೋರಲು ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ನರಸಿಂಹ ಮೂರ್ತಿ, ಮಲ್ಲಿಕಾರ್ಜುನಯ್ಯ ಬಿ.ಎಸ್., ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಕೃಷ್ಣ ವಿ.ಬಿ., ಚಂದ್ರಶೇಖರ್ ಮಠದ, ಬಿ.ಜಿ. ಕುಂಬಾರ್, ಮಹೇಶ್ ನಗರಂಗೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಬೇಂದ್ರೆ ಹಾಗೂ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ