ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಕೊಮ್ಮೇನಹಳ್ಳಿ ಗ್ರಾಮದಲ್ಲಿ ಗ್ರಾಮದ ಭಜರಂಗಿ ಬಾಯ್ಸ್ ಯುವಕ ಸಂಘದವರು ಪಿತೃಪಕ್ಷ ಹಾಗೂ ಆಯುಧ ಪೂಜೆ, ವಿಜಯದಶಮಿ ಮತ್ತು ನಾಡಹಬ್ಬ ದಸರಾ ಅಂಗವಾಗಿ ಆಯೋಜಿಸಿದ್ದ ಸಂಗೀತ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ರಾಜಕಾರಣದಲ್ಲಿ ಅಪ್ರಾಮಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹಣ ಬಲದ ಮೂಲಕ ಕಳ್ಳರು, ನಾಟಕ ಮಾಡುವವರು ಮತ್ತು ಡ್ಯಾನ್ಸ್ ಮಾಡಿ ಜನರನ್ನು ಮರಳು ಮಾಡುವವರು ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ. ಹುಸಿ ಸಮಾಜ ಸೇವೆಯ ಹೆಸರಿನಲ್ಲಿ ಹಣ ಹಂಚಿಕೆ ಮಾಡುತ್ತಾ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಇದರಿಂದಾಗಿ ಅಭಿವೃದ್ಧಿ ರಾಜಕಾರಣ ಹಿಂದೆ ಸರಿದು ಹಣ ಹಂಚಿಕೆಯ ರಾಜಕಾರಣ ಮುಂಚೂಣಿಗೆ ಬಂದಿದೆ ಎಂದು ವಿಷಾದಿಸಿದರು.ನಾನು ಕ್ಷೇತ್ರದ ಶಾಸಕನಾಗಿದ್ದಾಗ ವಿರೋಧ ಪಕ್ಷದ ಶಾಸಕನಾಗಿದ್ದರೂ ಅಂದಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಮನವೊಲಿಸಿ ಸುಮಾರು ೨೫೦ ಕೋಟಿ ರು. ವೆಚ್ಚದಲ್ಲಿ ಹೇಮಗಿರಿ, ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳ ಅಧುನೀಕರಣ ಮಾಡಿಸಿದೆ. ನೂರಾರು ಕೋಟಿ ರು. ವೆಚ್ಚದಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿ ಮಾಡಿಸಿದ್ದೆ. ತಾಲೂಕಿನ ಉಯ್ಗೋನಹಳ್ಳಿ ಬಳಿ ೨೨೦ ಕೆ.ವಿ ವಿದ್ಯುತ್ ವಿತರಣಾ ಘಟಕ ಸ್ಥಾಪಿಸಿದೆ. ಇದರ ಪರಿಣಾಮ ತಾಲೂಕಿನ ರೈತರಿಗೆ ವಿದ್ಯುತ್ ಸಮಸ್ಯೆ ಬಗೆಹರಿದಿದೆ.
ವಕೀಲ ಚಟ್ಟಂಗೆರೆ ನಾಗೇಶ್, ಯುವ ಮುಖಂಡ ಅನಿಲ್ ಗೌಡ, ಹರಿಹರಪು ಶ್ರೀಧರ್ ಸೇರಿದಂತೆ ಗ್ರಾಮ ಮುಖಂಡರು ಮತ್ತು ಯುವಕ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.