ಕುಷ್ಠರೋಗ ಮುಕ್ತ ಜಿಲ್ಲೆಯಾಗಿಸಲು ಅಭಿಯಾನಕ್ಕೆ ಸಹಕರಿಸಿ

KannadaprabhaNewsNetwork |  
Published : Feb 04, 2026, 02:00 AM IST
2ಕೆಆರ್ ಎಂಎನ್ 2.ಜೆಪಿಜಿರಾಮನಗರ ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ರಾಮನಗರ: ಜಿಲ್ಲೆಯನ್ನು ಕುಷ್ಠರೋಗ ಮುಕ್ತವನ್ನಾಗಿಸಲು ನಾಗರಿಕರು ಸಹಕರಿಸುವಂತೆ ಜಿಪಂ ಮುಖ್ಯ ಲೆಕ್ಕಾಧಿಕಾರಿ ಮಂಜುಳಾ ಕರೆ ನೀಡಿದರು

ರಾಮನಗರ: ಜಿಲ್ಲೆಯನ್ನು ಕುಷ್ಠರೋಗ ಮುಕ್ತವನ್ನಾಗಿಸಲು ನಾಗರಿಕರು ಸಹಕರಿಸುವಂತೆ ಜಿಪಂ ಮುಖ್ಯ ಲೆಕ್ಕಾಧಿಕಾರಿ ಮಂಜುಳಾ ಕರೆ ನೀಡಿದರು.

ನಗರದ ಜಿಪಂನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಐಕಾನ್ ನರ್ಸಿಂಗ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಜಿಲ್ಲಾದ್ಯಂತ 14 ಪ್ರಕರಣ ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ನಾಗರಿಕರು ಸಹಕರಿಸುವಂತೆ ಕೋರಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕುಮಾರ್ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜನವರಿ 30ರಿಂದ ಫೆಬ್ರವರಿ 13ರವರೆಗೆ ಜಿಲ್ಲಾದ್ಯಂತ ನಡೆಯಲಿದೆ ಎಂದು ಹೇಳಿದರು.

ಕುಷ್ಠ ರೋಗ ಮೈಕ್ರೋ ಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಹರಡುತ್ತದೆ. ದೇಹದ ಮೇಲೆ ಯಾವುದೇ ಸ್ಪರ್ಶ ಜ್ಞಾನವಿಲ್ಲದ ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು ಕಾಣಿಸುವುದು, ಕೈಕಾಲುಗಳಲ್ಲಿ ಜೋಮು ಹಿಡಿದು ಸ್ಪರ್ಶ ಜ್ಞಾನವಿಲ್ಲದಿರುವುದು, ಕೈಕಾಲುಗಳಲ್ಲಿ ಹಾಗೂ ಮುಖದಲ್ಲಿ ಎಣ್ಣೆ ಸವರಿದಂತೆ ಹೊಳಪು ಇರುವುದು ರೋಗಲಕ್ಷಣವಾಗಿರುತ್ತದೆ. ಈ ರೋಗಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಂಡು ರೋಗವನ್ನು ಬಹು ಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತಾ ಮಾತನಾಡಿ, ಕುಷ್ಠರೋಗಕ್ಕೆ ಅಂಟಿರುವ ಕಳಂಕವನ್ನು ಹೋಗಲಾಡಿಸಲು ಬದ್ಧರಾಗಿ ಅವರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು. ಮಹಾತ್ಮ ಗಾಂಧೀಜಿಯವರ ಕನಸಾದ ಕುಷ್ಠರೋಗ ಮುಕ್ತ ಭಾರತ ಕಟ್ಟಲು ಕಾಯಾ, ವಾಚಾ, ಮನಸಾ ಶ್ರಮಿಸಬೇಕೆಂದು ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ ಶಶಿಕಿರಣ್, ಜಿಲ್ಲಾ ಮಲೇರಿಯಾ ರೋಗ ನಿರ್ಮೂಲನಾಧಿಕಾರಿ ಡಾ. ಪದ್ಮಾವತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಾಸಯ್ಯ, ಆರೋಗ್ಯ ನಿರೀಕ್ಷಣಾಧಿಕಾರಿ ಅನುರೂಪ, ಎಂ.ಐ.ಎಸ್ ಶೃತಿ, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

(ಫೋಟೋ)

2ಕೆಆರ್ ಎಂಎನ್ 2.ಜೆಪಿಜಿ

ರಾಮನಗರ ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು