ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕೆಆರ್‌ಎಸ್‌ ಪಕ್ಷ ಬೆಂಬಲಿಸಿ

KannadaprabhaNewsNetwork |  
Published : Jun 01, 2024, 12:46 AM IST
31ಕೆಡಿವಿಜಿ4-ದಾವಣಗೆರೆಯಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಕೆಆರೆಸ್ ಅಭ್ಯರ್ಥಿ ಎಂ.ಜಿ.ಕಿಶನ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕರ್ನಾಟಕ ವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕೆಆರ್‌ಎಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಈ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ತಮಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಗೆಲ್ಲಿಸಬೇಕು ಎಂದು ಅಭ್ಯರ್ಥಿ ಎಂ.ಜಿ. ಕಿಶನ್ ಮನವಿ ಮಾಡಿದರು.

- ಶಿಕ್ಷಕರ ಸಮಸ್ಯೆ ಪರಿಹಾರಕ್ಕಾಗಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ: ಕಿಶನ್‌

- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಕರ್ನಾಟಕ ವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕೆಆರ್‌ಎಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಈ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ತಮಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಗೆಲ್ಲಿಸಬೇಕು ಎಂದು ಅಭ್ಯರ್ಥಿ ಎಂ.ಜಿ. ಕಿಶನ್ ಮನವಿ ಮಾಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರು ಮತ್ತು ಶಿಕ್ಷಕರ ಕ್ಷೇತ್ರ ನಿರಂತರವಾಗಿ ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳನ್ನು ಪರಿಹರಿಸಲು, ದಕ್ಷ ಹಾಗೂ ಪ್ರಾಮಾಣಿಕ ಆಡಳಿತದಿಂದ ಮಾತ್ರ ಸಾಧ್ಯ. ಅದನ್ನು ಹೊರತುಪಡಿಸಿದರೆ ಬೇರೆ ಯಾವುದೇ ಮಾರ್ಗವಿಲ್ಲ. ಈ ನಿಟ್ಟಿನಲ್ಲಿ ತಮ್ಮ ಪಕ್ಷ ಶಿಕ್ಷಕರ ಪರವಾಗಿ ಕೆಲಸ ಮಾಡಲಿದೆ ಎಂದರು.

ಅತಿಥಿ ಶಿಕ್ಷಕರ ಸಮಸ್ಯೆ ದೊಡ್ಡದಾಗಿ ಕಾಡುತ್ತಿದೆ. ಕಳೆದ 4 ದಶಕದಿಂದ ಸಮಸ್ಯೆ ಉಲ್ಭಣಿಸುತ್ತಲೇ ಇದೆ ಹೊರತು, ಸಮಸ್ಯೆ ಪರಿಹರಿಸುವ ಯಾವುದೇ ಕೆಲಸವನ್ನು ಸರ್ಕಾರಗಳು ಮಾಡಿಲ್ಲ. ಮುಂದೆಯೂ ಸಮಸ್ಯೆ ಪರಿಹರಿಸಲು ಇಂತಹ ಸರ್ಕಾರಗಳಿಂದ ಸಾಧ್ಯವಾಗುವುದಿಲ್ಲ. ಇನ್ನು ರಾಜ್ಯದಲ್ಲಿ ಸರ್ಕಾರಿ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿಯೂ ಆಗುತ್ತಿಲ್ಲ ಎಂದು ದೂರಿದರು.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿರುವ ಶಿಕ್ಷಕರು, ಅತಿಥಿ ಬೋಧಕರು ಸಾಮಾಜಿಕ, ಆರ್ಥಿಕ ಸಮಸ್ಯೆಗೆ ತುತ್ತಾಗಿದ್ದಾರೆ. ಇವೆಲ್ಲಾ ಸಮಸ್ಯೆಗಳು ಒಂದಕ್ಕೊಂದು ಬೆಳೆದಿದ್ದು, ಅಂತಿಮವಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ಬೇಕಾಗಿದೆ. ಪ್ರಸ್ತುತ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಂದ ಮತ್ತು ಆ ಪಕ್ಷಗಳ ಅಭ್ಯರ್ಥಿಗಳಿಂದ ಇದನ್ನೆಲ್ಲಾ ನಾವು ನಿರೀಕ್ಷಿಸಲು ಸಾಧ್ಯವೇ ಇಲ್ಲ. ಈ ಕಾರಣಕ್ಕೆ ಶಿಕ್ಷಣ ಮತ್ತು ಶಿಕ್ಷಕರ ಕ್ಷೇತ್ರದ ಸಮಸ್ಯೆ ಉಲ್ಬಣಿಸುತ್ತಿವೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಉಚಿತ ಶಿಕ್ಷಣ, ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕೆಂಬುದು ಕೆಆರೆಸ್ ಪಕ್ಷದ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ, ಶಿಕ್ಷಕರ ಸಮಸ್ಯೆ ಪರಿಹರಿಸುವುದಷ್ಟೇ ಆದ್ಯತೆಯ ಕೆಲಸಗಳಾಗಿವೆ. ರಾಜ್ಯ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಂ.ಜಿ. ಕಿಶನ್ ಸ್ಪರ್ಧಿಸಿದ್ದು, ತಮಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಗೆಲ್ಲಿಸುವಂತೆ ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.

ಪಕ್ಷದ ಕೆ.ಎಸ್. ವೀರಭದ್ರಪ್ಪ, ವೆಂಕಟೇಶಪ್ಪ ಇತರರು ಇದ್ದರು.

- - - -31ಕೆಡಿವಿಜಿ4:

ದಾವಣಗೆರೆಯಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಕೆಆರ್‌ಎಸ್ ಅಭ್ಯರ್ಥಿ ಎಂ.ಜಿ. ಕಿಶನ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ