ಸಿಗಂದೂರು ದೇವಿ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನಾ

KannadaprabhaNewsNetwork |  
Published : Jun 03, 2024, 12:30 AM IST
ಫೋಟೋ 02 ಬ್ಯಾಕೋಡು 01 ಸಾಗರ ತಾಲೂಕಿನ ಸಿಂಗದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಾನುವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಇಲ್ಲಿನ ಬ್ಯಾಕೋಡು ಮಾರ್ಗದ ಮೂಲಕ ನೇರವಾಗಿ ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದರು. ಮಧ್ಯಾಹ್ನ 3 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಸ್ಥಾನದ ಧರ್ಮಾಧಿಕಾರಿ ಎಸ್. ರಾಮಪ್ಪ ಅತ್ಮೀಯವಾಗಿ ಸ್ವಾಗತಿಸಿ, ದೇವಸ್ಥಾನದ ಪೂಜಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಬ್ಯಾಕೋಡು

ರಾಜ್ಯದ ಪ್ರಸಿದ್ಧ ಶಕ್ತಿ ದೇವತೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಾನುವಾರ ಮಧ್ಯಾಹ್ನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಇಲ್ಲಿನ ಬ್ಯಾಕೋಡು ಮಾರ್ಗದ ಮೂಲಕ ನೇರವಾಗಿ ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದರು. ಮಧ್ಯಾಹ್ನ 3 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಸ್ಥಾನದ ಧರ್ಮಾಧಿಕಾರಿ ಎಸ್. ರಾಮಪ್ಪ ಅತ್ಮೀಯವಾಗಿ ಸ್ವಾಗತಿಸಿ, ದೇವಸ್ಥಾನದ ಪೂಜಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ನಂತರ ದೇವಸ್ಥಾನದ ಶ್ರೀ ನಂದಿಯನ್ನು ವೀಕ್ಷಿಸಿದರು .ನ್ಯಾಯಮೂರ್ತಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ತಂಡದಿಂದ ಸಿಗಂದೂರು, ಹೊಳೆಬಾಗಿಲಿನಲ್ಲಿ ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೆಲ ಕಾಲ ದೇವಿ ದರ್ಶನಕ್ಕೆ ತಡೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳ ಕಾರ್ಯದರ್ಶಿ ಪಾರ್ವತಿ, ಪುತ್ರಿ ಲಾವಣ್ಯ, ದೇವಸ್ಥಾನದ ಅನುವಂಶಿಕ ಧರ್ಮಾಧಿಕಾರಿ ಎಸ್ ರಾಮಪ್ಪ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್ ಆರ್, ಜಿಲ್ಲಾ ನ್ಯಾಯಾಲಯ ಹಾಗೂ ತಾಲೂಕು ನ್ಯಾಯಾಲಯದ ಪ್ರಮುಖರು, ಕಂದಾಯ ಇಲಾಖೆಯ ಅಧಿಕಾರಿಗಳು, ದೇವಸ್ಥಾನದ ಸಿಬ್ಬಂದಿ ಇದ್ದರು.

--------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ