ಕನ್ನಡಪ್ರಭ ವಾರ್ತೆ ಹುಣಸಗಿ
ಈ ವೇಳೆ ದಲಿತ ಯುವ ಮುಖಂಡ ಸಿದ್ದಣ್ಣ ಮೇಲಿನಮನಿ ಮಾತನಾಡಿ, ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ 7 ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಹಾಗೂ ಕಳೆದ 30 ವರ್ಷಗಳ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದರು.
ಪರಿಶಿಷ್ಟ ಜಾತಿಯಲ್ಲಿಯೇ ಮಾದಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಮೀಸಲು ಕಲ್ಪಿಸುವ ವಿಷಯದಲ್ಲಿ ತಾರತಮ್ಯವಾಗುತ್ತಿತ್ತು. ನಿರೀಕ್ಷಿತ ಮಟ್ಟದಲ್ಲಿ ಇಂಥ ಅನೇಕ ಸಮುದಾಯಗಳಿಗೆ ಮೀಸಲು ಸಿಗುತ್ತಿರುಲಿಲ್ಲ. ಜಾತಿವಾರು ವರ್ಗೀಕರಣ ಮಾಡಿ ಜನಸಂಖ್ಯೆಗನುಗುಣವಾಗಿ ಮಾದಿಗ ಸಮುದಾಯಕ್ಕೆ ಮೀಸಲು ಸಿಗಬೇಕು ಎಂಬ ಬಹು ದಿನಗಳ ಹೋರಾಟಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ಎಂದರು.ಮಾದಿಗ ಸಮಾಜದ ಬೇಡಿಕೆ ಪರಿಗಣಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಶೇಷ ಪೀಠ ಸ್ಥಾಪನೆಗೆ ಕಾರಣರಾಗುವ ಮೂಲಕ ಬೇಡಿಕೆಗೆ ಸ್ಪಂದಿಸಿದ್ದಾರೆ. ನೀಡಿದ ಭರವಸೆಯಂತೆ ಕಾಲಮಿತಿ ಒಳಗೆ ಆದೇಶ ಹೊರಬರಲು ಕಾರಣವಾಗಿದ್ದಾರೆ. ಈ ತೀರ್ಪಿನಿಂದ ಇಡೀ ದೇಶದ ಮಾದಿಗ ಸಮಾಜದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದ ಅವರು, ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.