
ಕನ್ನಡಪ್ರಭ ವಾರ್ತೆ ತುಮಕೂರು
ಬಿಸಿಯೂಟದ ರಚಿ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಶಾಸಕರು, ವಿದ್ಯಾರ್ಥಿಗಳಿಗೆ ನಿತ್ಯಾ ಇದೇ ಗುಣಮಟ್ಟದ ಆಹಾರ ನೀಡುವಂತೆ ಸಿಬ್ಬಂದಿಗೆ ಸೂಚಿಸಿದರು. ಮಾಜಿ ಸಂಸದ ದಿ.ಎಸ್.ಮಲ್ಲಿಕಾರ್ಜುನಯ್ಯ ಅವರ ಹುಟ್ಟೂರಾದ ಹೊನಸಿಗೆರೆಯ ಈ ಶಾಲೆಯಲ್ಲಿ ಶಾಸಕರು ಮೊದಲು ಎಸ್ಡಿಎಂಸಿ ಸಭೆ ನಡೆಸಿ ಕುಂದುಕೊರತೆ ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಊಟ, ಬಾಳೆ ಹಣ್ಣು ಸವಿದರು.
ಬೆಂಗಳೂರಿನ ಜಿಂದಾಲ್ ಕಂಪನಿಯ ಸಿಎಸ್ಆರ್ ನಿಧಿಯಡಿ ಅಭಿವೃದ್ಧಿಯಾಗಿರುವ ಈ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಆಗಿನ ರಾಜ್ಯಪಾಲರಾದ ವಜೂಭಾಯಿ ವಾಲಾ ಹಾಗೂ ಅಂದಿನ ಶಿಕ್ಷಣ ಸಚಿವ ತನ್ವೀರ್ ಸೇಠ್ ಭಾಗವಹಿಸಿದ್ದರು. ಶಾಸಕರು ಹೊನಸಿಗೆರೆ ಶಾಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.