ಜಾತಿ, ಭೇದವಿಲದಲ್ಲದ ಸಮಾಜ ನಿರ್ಮಿಸಲು ಶರಣರಿಂದ ಶ್ರಮ: ಎಲ್ಲೇಗೌಡ ಬೆಸಗರಹಳ್ಳಿ

KannadaprabhaNewsNetwork |  
Published : Nov 15, 2024, 12:33 AM IST
ಕೆ ಕೆ ಪಿ ಸುದ್ದಿ 02: ನಗರದ ನಿರ್ವಹಣೆಶ್ವರ ನಗರದಲ್ಲಿ ಸ್ನೇಹ ಸ್ಪಂದನ ಗೆಳೆಯರ ಬಳಗದವರು ಬಸವ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಿಸಿದರು. | Kannada Prabha

ಸಾರಾಂಶ

ನಮ್ಮ ಭಾಷೆಗೆ ಶ್ರೀಮಂತಿಕೆಯನ್ನು ತಂದುಕೊಟ್ಟ ಪಂಪ, ರನ್ನ, ಕುಮಾರವ್ಯಾಸ, ರಾಘವಾಂಕ, ಹರಿಹರ ಈ ಎಲ್ಲ ಮಹಾಕವಿಗಳು ನಡೆದು ಬಂದ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಬೇಕು.

ಕನಕಪುರ: ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ ಜಾತಿ, ಭೇದ ಇಲ್ಲದ ಸಮಾಜ ನಿರ್ಮಾಣ ಮಾಡಲು ಬುನಾದಿ ಹಾಕಿ ಬಸವಣ್ಣನವರು ಇಡೀ ಜಗತ್ತಿಗೇ ಬೆಳಕಾದರು ಎಂದು ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ ತಿಳಿಸಿದರು. ನಗರದ ನಿರ್ವಾಣೇಶ್ವರ ಸ್ನೇಹ ಸ್ಪಂದನ ಗೆಳೆಯರ ಬಳಗದ ವತಿಯಿಂದ ನಡೆದ ಬಸವ ಜಯಂತಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣ, ಅಲ್ಲಮಪ್ರಭು, ಮಡಿವಾಳ ಮಾಚಿದೇವ, ನುಲಿಯ ಚಂದಯ್ಯ, ಸಿದ್ದರಾಮ, ಹಡಪದ ಅಪ್ಪಣ್ಣ, ಮುತ್ತಾಯಿ, ಅಕ್ಕ ಮಹಾದೇವಿ, ಅಕ್ಕ ನೀಲಮ್ಮ ಸೇರಿದಂತೆ ಎಲ್ಲ ಶರಣರು ಜಾತಿ, ಭೇದ ಇಲ್ಲದ ಸಮಾಜವನ್ನು ನಿರ್ಮಾಣ ಮಾಡಲು ಕ್ರಾಂತಿಯನ್ನೇ ನಡೆಸಿದ್ದನ್ನು ಈ ವೇಳೆ ನೆನೆದರು.

ನಮ್ಮ ಭಾಷೆಗೆ ಶ್ರೀಮಂತಿಕೆಯನ್ನು ತಂದುಕೊಟ್ಟ ಪಂಪ, ರನ್ನ, ಕುಮಾರವ್ಯಾಸ, ರಾಘವಾಂಕ, ಹರಿಹರ ಈ ಎಲ್ಲ ಮಹಾಕವಿಗಳು ನಡೆದು ಬಂದ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಮನಸ್ಸು ಮತ್ತು ಆತ್ಮವನ್ನು ಶುದ್ಧಿಯಾಗಿಟ್ಟುಕೊಂಡು ಬದುಕಬೇಕು, ಇದನ್ನೇ ಶರಣರು ಸಹ ಹೇಳಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಎಚ್.ಪಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು, ನಿರ್ವಾಣೇಶ್ವರ ನಗರದ ಸ್ನೇಹ ಸ್ಪಂದನ ಗೆಳೆಯರ ಬಳಗದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಮಕ್ಕಳು ಮಹಿಳೆಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಗಾನ ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಗಜು ಭಟ್ಟ ಖರ್ವಾ
ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಆಯೋಗ ಸದಾ ಸಿದ್ಧ