
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಭಾರತೀಯ ಭೂವೈಜ್ಞಾನಿಕ ಏರೋ ಜಿಯೋಫಿಸಿಕಲ್ (ವಾಯುಗಾಮಿ ಭೂಭೌತಿಕ) ಸಮೀಕ್ಷೆಯನ್ನು ಮೆಸರ್ಸ್ ಎಕ್ಸ್ಕ್ಯಾಲಿಬರ್ ಮೆಕ್ಫಾರ್ ಪ್ರೈವೇಟ್ ಕಂಪನಿಯಿಂದ ಖನಿಜ ನಿಕ್ಷೇಪಗಳ ಪ್ರದೇಶ ಗುರುತಿಸುವ ಕಾರ್ಯ ಮಾಡಲಾಗುತ್ತಿದೆ. ಈ ಸಮೀಕ್ಷೆ ಜುಲೈ 31ರ ವರೆಗೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲ ದಿನಗಳಿಂದ ಕಡಿಮೆ ಎತ್ತರದಲ್ಲಿ ವೈಮಾನಿಕ ಹಾರಾಟದ ದೃಶ್ಯ ಗೋಚರಿಸಲಿದೆ. ಈ ಬಗ್ಗೆ ಸಾರ್ವಜನಿಕರಲ್ಲಿನ ಗೊಂದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರಿಂದ ಈ ಸ್ಪಷ್ಟೀಕರಣಗಳನ್ನು ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.ಫೋಟೋ
ಕಳೆದ ಗುರುವಾರ ಲಘು ವಿಮಾನ ಹಾರಾಟ ನಡೆಸಿದ ಕುರಿತು ಪೊಲೀಸ್ ಇಲಾಖೆ ನಕ್ಷೆ ನೀಡಿದೆ.