ನಿಗದಿತ ಅವಧಿಗೂ ಮೊದಲೇ ಸಮೀಕ್ಷೆ ಪೂರ್ಣ, ಸನ್ಮಾನ

KannadaprabhaNewsNetwork |  
Published : Oct 04, 2025, 12:00 AM IST
3ಡಿಡಬ್ಲೂಡಿ4ನಿಗದಿತ ಅವಧಿಗಿಂತ ಮುಂಚಿತವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯ ಪೂರೈಸಿದ ಗಣತಿದಾರ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಅವರನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು. | Kannada Prabha

ಸಾರಾಂಶ

134 ಮನೆಗಳ ಗಣತಿ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ ಗಣತಿದಾರ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಅವರನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.

ಧಾರವಾಡ:

ನಿಗದಿತ ಅವಧಿಗಿಂತ ಮುಂಚಿತವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯ ಪೂರೈಸಿದ ಗಣತಿದಾರ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಅವರನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.

ಗುಡೇನಕಟ್ಟಿ ಅವರಿಗೆ ವಾರ್ಡ್ ನಂ. 7ರ 129 ಮನೆಗಳ ಗುರಿ ನೀಡಲಾಗಿತ್ತು. ಅಂತೆಯೇ, ಮಹಾವೀರ ನಗರ, ರಾಮರಹೀಮ್ ಕಾಲನಿಯ ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ ಗಾರ್ಡನ್ ಹತ್ತಿರದ ಬ್ಲಾಕ್‌ನಲ್ಲಿ ಒಟ್ಟು 134 ಮನೆಗಳ ಗಣತಿ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ.

ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ, ಪಾಲಿಕೆ ವಲಯ ಸಹಾಯಕ ಆಯುಕ್ತ ಶಂಕರ ಪಾಟೀಲ, ಬಿಇಒ ಅಶೋಕ ಸಿಂದಗಿ, ಸಮನ್ವಯಾಧಿಕಾರಿ ಮಂಜು ಅಡವೇರ್ ಹಾಗೂ ಮೇಲ್ವಿಚಾರಕ ಜಿ.ಬಿ. ಶೆಟ್ಟರ್, ಸುಮಿತಾ ಹಿರೇಮಠ, ಎಸ್.ಬಿ. ಅರಮನಿ, ಎಂ.ಆರ್. ಕಬ್ಬೇರ, ಮಹೇಶ ಬಾಳಗಿ, ಆಸಿಫ್ ಸವಣೂರ ಹಾಗೂ ವಿ.ಎಂ. ಪಾಟೀಲ, ಇರ್ಫಾನ್ ಕವಲಗೇರಿ ಗೌರವಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ