ಕನ್ನಡಪ್ರಭ ವಾರ್ತೆ ಬೆಂಗಳೂರು
ಚಾಮರಾಜಪೇಟೆಯ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಕ್ಷಮ ವಿಶೇಷ ಚೇತನರ ದಕ್ಷಿಣ ಪ್ರಾಂತ ಅಧಿವೇಶನ ಉದ್ಘಾಟಿಸಿ ಮಾತನಾಡಿದ ಅವರು, ದಿವ್ಯಾಂಗರ ಬಗ್ಗೆ ಅನುಕಂಪ ಬೇಡ, ಅವಕಾಶ ನೀಡಿದರೆ ಸಾಧನೆ ಮಾಡುತ್ತಾರೆ. ಸರ್ಕಾರಗಳು ಅನೇಕ ಯೋಜನೆ ಜಾರಿಗೊಳಿಸಿದರೂ ಸರಿಯಾಗಿ ತಲುಪಿಸುವ ಕೆಲಸ ಆಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಜನೆ ಅಂತಿಮ ವ್ಯಕ್ತಿಗೆ ತಲುಪಿಸುವ ಕಾರ್ಯ ಮಾಡುತ್ತಾರೆ. ನಾವು ಅಧಿಕಾರದಲ್ಲಿದ್ದಾಗ ಸಕ್ಷಮ ಸಂಸ್ಥೆಯ ಸೇವೆ ಗುರುತಿಸಿ ಪ್ರಶಸ್ತಿ ನೀಡಿದ್ದೆವು. ಉತ್ತಮ ಕೆಲಸ ಮಾಡುವವರನ್ನು ಗೌರವಿಸುವುದರಲ್ಲಿ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟರು.ದಿವ್ಯಾಂಗರು ಎಲ್ಲ ರಂಗದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾನ್ಯ ಮನುಷ್ಯರಿಗಿಂತ ಮಿಗಿಲಾದ ಕಲ್ಪನಾ ಶಕ್ತಿಯನ್ನು ಹೊಂದಿರುತ್ತಾರೆ, ದಿವ್ಯಾಂಗರನ್ನು ವಿಕಲಚೇತನ, ವಿಶೇಷ ಚೇತನ ಎಂದು ಕರೆಯುತ್ತೇವೆ. ಸಾಧಿಸುವ ಛಲ ಹೊಂದಿರುವ ಅವರಿಗೆ ಅವಕಾಶ ನೀಡಿದರೆ ಸ್ವಾಭಿಮಾನದಿಂದ ಬದುಕುತ್ತಾರೆ. ಅವರೇ ನಿಜವಾದ ಯೋಗಿಗಳು ಎಂದು ಬಣ್ಣಿಸಿದರು.
ನಾವು ಕೆಲವು ಸಾರಿ ಭಿಕ್ಷುಕರಾಗುತ್ತೇವೆ. ರಾಜಕಾರಣಿಗಳು ಟಿಕೆಟ್ ಭಿಕ್ಷೆ ಬೇಡುತ್ತಾರೆ. ವ್ಯಾಪಾರಿ ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಆದರೆ, ದಿವ್ಯಾಂಗರು ಸ್ವಾಭಿಮಾನದಿಂದ ಬದುಕುತ್ತಾರೆ. ನಾನು ಪಂಡಿತ ಪುಟ್ಟರಾಜ ಗವಾಯಿಗಳ ಸಂಪರ್ಕದಲ್ಲಿ ಸಾಕಷ್ಟು ಪಡೆದಿದ್ದೇನೆ ಎಂದು ಬೊಮ್ಮಾಯಿ ಸ್ಮರಿಸಿದರು.