ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಸದಾಶಿವನಗರದ ಶಿವಕುಮಾರ್ ನಿವಾಸದಲ್ಲಿ ಭೇಟಿಯಾದ ತೇಜಸ್ವಿ ಸೂರ್ಯ, ಸುರಂಗ ಮಾರ್ಗದಿಂದ ಎದುರಾಗುವ ಸಮಸ್ಯೆಗಳು ಮತ್ತು ಅದಕ್ಕೆ ಯಾವೆಲ್ಲ ಯೋಜನೆಗಳನ್ನು ಪರ್ಯಾಯವಾಗಿ ಅನುಷ್ಠಾನಗೊಳಿಸಬಹುದು ಎಂಬುದರ ಬಗ್ಗೆ ತಿಳಿಸಿದರು. ಅದಕ್ಕೆ, ತೇಜಸ್ವಿ ಸೂರ್ಯ ನೀಡಿರುವ ಸಲಹೆಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಶಿವಕುಮಾರ್ ಸೂಚಿಸಿದರು.
ತೇಜಸ್ವಿ ಸೂರ್ಯ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು, ಸುರಂಗ ಮಾರ್ಗಕ್ಕೆ ಪರ್ಯಾಯವಾಗಿ ನೀಡಿರುವ ಸಲಹೆಗಳು ನಗರದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರವಾಗಿ ಕಾಣಲಿಲ್ಲ. ಆದರೂ, ಅವರ ಸಲಹೆಗಳನ್ನು ಗೌರವಿಸುತ್ತೇನೆ ಮತ್ತು ಅವುಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಟನಲ್ ರಸ್ತೆ ಕೇವಲ ಕಾರುಗಳಿಗೆ ಅನುಕೂಲವಾಗುತ್ತದೆ. ಮೆಟ್ರೋ ಮಾರ್ಗ ವಿಸ್ತರಿಸಿದರೆ ಪರಿಹಾರ ಸಿಗಲಿದೆ ಎಂದು ತಿಳಿಸಿದ್ದಾರೆ. ಮೆಟ್ರೋ ಮಾರ್ಗ ವಿಸ್ತರಿಸಲು ನಮ್ಮ ತಕರಾರಿಲ್ಲ. ಹಾಗೆಯೇ, ಖಾಸಗಿ ಬಸ್ ಮತ್ತು ಸಣ್ಣ ಬಸ್ಗಳ ಸೇವೆಗೆ ಅವಕಾಶ ನೀಡುವಂತೆ ಹೇಳಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಿದ್ದು, ಖಾಸಗಿ ಬಸ್ಗಳಿಗೆ ಅವಕಾಶ ನೀಡಿದರೆ ಏನು ಉಪಯೋಗ ಎಂದು ಚರ್ಚಿಸಬೇಕು ಎಂದು ತಿಳಿಸಿದರು.
ತೇಜಸ್ವಿ ಸೂರ್ಯ ಬೆಂಗಳೂರು ಮೆಟ್ರೋ ಲ್ಯಾಂಡ್ ಟ್ರಾನ್ಸ್ಪೋರ್ಟ್ (ಬಿಎಂಎಲ್ಟಿ) ಮಾಡಬೇಕು ಎಂದಿದ್ದಾರೆ. ಅದಕ್ಕೆ ನಿಮ್ಮ ಕಾಲದಲ್ಲಿ ಅದನ್ನು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದೆ. ಅದಕ್ಕೆ ಆಗ ಆಗಲಿಲ್ಲ ಎಂದರು. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ಕೊಡಿಸುತ್ತೀರಿ ಎಂದು ಕೇಳಿದೆ. ಜತೆಗೆ ನಿಮ್ಮ ಸಂಸದರೆಲ್ಲ ಬನ್ನಿ. ನಾನೂ ಬರುತ್ತೇನೆ. ಪ್ರಧಾನಿಗಳನ್ನು ಭೇಟಿಯಾಗಿ ಅನುದಾನಕ್ಕಾಗಿ ಒತ್ತಾಯಿಸೋಣ ಎಂದು ಹೇಳಿದ್ದೇನೆ ಎಂದು ಶಿವಕುಮಾರ್ ಹೇಳಿದರು.ಟನಲ್ಗೆ ಲಾಲ್ಬಾಗ್ ಭೂಮಿ ಸ್ವಾಧೀನವಿಲ್ಲ:ಟನಲ್ ರಸ್ತೆಗೆ ಲಾಲ್ಬಾಗ್ ಭೂಮಿ ಬಳಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ. ಆದರೆ, ನಾವು ಲಾಲ್ಬಾಗ್ನಲ್ಲಿ ಆರು ಎಕರೆ ಭೂಮಿ ಬಳಸಿಕೊಳ್ಳುತ್ತಿಲ್ಲ. ಲಾಲ್ಬಾಗ್ ಮೂಲೆಯಲ್ಲಿ ಟನಲ್ ರಸ್ತೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದೆ. ಆದರೆ, ಅಲ್ಲಿ ಬೇಡ ಎಂದು ಹೇಳಿದರೆ, ಬೇರೆ ಎಲ್ಲಿ ಅದಕ್ಕೆ ಅವಕಾಶ ಕಲ್ಪಿಸಬಹುದು ಎಂಬ ಸಲಹೆ ನೀಡಿ ಎಂದು ತಿಳಿಸಿದ್ದೇನೆ ಎಂದರು.ನೀವು ಒಬ್ಬರು ಹೇಳಿದಂತೆ ಕೇಳಲಾಗದು:
ಭೇಟಿಗೆ ಕಾರಲ್ಲಿ ಬಂದಿದ್ರು!:
ಟನಲ್ ರಸ್ತೆ ವಿರುದ್ಧವಾಗಿ ಹೈಕೋರ್ಟ್ನಲ್ಲಿ ಪಿಐಎಲ್ ದಾಖಲಿಸಿದ್ದಾರೆ. ಟನಲ್ ರಸ್ತೆ ಬಗ್ಗೆ ನ್ಯಾಯಾಲಯವೇ ಸಮಿತಿ ರಚಿಸಿ ಸ್ಥಳಗಳನ್ನು ಪರಿಶೀಲಿಸಲಿ. ನಾನು ಅಥವಾ ನಮ್ಮ ಅಧಿಕಾರಿಗಳು ತಪ್ಪು ಮಾಡಿದ್ದರೆ ತಿಳಿಸಲಿ. ಅದನ್ನು ಸರಿಪಡಿಸಿಕೊಳ್ಳಲು ಸಿದ್ಧರಿದ್ದೇವೆ